ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾಧಕರ ಬದುಕು ಎನ್.ಎಸ್.ಎಸ್ ಶಿಬಿರಾರ್ಥಿಗಳಿಗೆ ಆದರ್ಶವಾಗಲಿ

ಬಾಗಲಕೋಟೆ/ಬೇವೂರು:ಗಾಂಧೀಜಿ, ಅಬ್ರಾಹಿಂ ಲಿಂಕನ್, ಅಲೆಕ್ಸಾಂಡರ್ ಮುಂತಾದ ಮಹನೀಯರ ಬದುಕಿನ ಸಾಹಸಗಾಥೆಗಳು ಯುವ ಸಮುದಾಯಕ್ಕೆ ಆದರ್ಶಪ್ರಾಯವಾಗಬೇಕು ಅನೇಕ ಪೆಟ್ಟುಗಳನ್ನು ಏರಿಳಿತಗಳನ್ನು ಕಂಡು ಜೀವನದಲ್ಲಿ ಸಾಧನೆ ತೋರಿದ ಸಾಧಕರ ಬದುಕು ಚಿರಸ್ಮರಣೆಯಾಗಿದೆ ಎಂದು ಡಾ. ಎಸ್ ಎಸ್ ಹಂಗರಗಿ ಪ್ರಾಧ್ಯಾಪಕರು ಹೇಳಿದರು.
ಪಿ. ಎಸ್ .ಎಸ್ ಕಾಲೇಜಿನ ವತಿಯಿಂದ ಸಮೀಪದ ಚಿಟಗಿನಕೊಪ್ಪ ಗ್ರಾಮದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೃಷ್ಣ ಬಲದಂಡೆ ಸೀತಿಮನಿಯ ಶ್ರೀ ವಶಿಷ್ಠ ಮಹಾಮನಿಗಳು ಶ್ರದ್ದಾನಂದ ಮಠ ಪೂಜ್ಯರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನುಡಿಗಳನ್ನಾಡಿ ವಿದ್ಯಾರ್ಥಿಗಳು ವಿಜ್ಞಾನದ ಜ್ಞಾನಕ್ಕಿಂತ ಸಂಸ್ಕಾರದ ಬದುಕಿಗೆ ಹೆಚ್ಚಿನ ಬೆಲೆ ಕೊಡಬೇಕೆಂದು ಹೇಳಿದರು. ಆದರ್ಶ ವಿದ್ಯಾ ವರ್ಧಕ ಸಂಘದ ಸದಸ್ಯರಾದ ಶ್ರೀ ಡಿ.ಜಿ ಶಿರೂರ ಅಧ್ಯಕ್ಷತೆ ವಹಿಸಿದ್ದರು. ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜ.ಗು. ಬೈರಮಟ್ಟಿ, ಹಿರಿಯ ಉಪನ್ಯಾಸಕರಾದ ಶ್ರೀ ಬಿ.ಬಿ ಬೇವೂರ ಉಪನ್ಯಾಸಕರಾದ ಶ್ರೀ ಎನ್. ಬಿ ಬೆನ್ನೂರ ಸೇರಿದಂತೆ ಕಾರ್ಯಕ್ರಮದಲ್ಲಿ ವೈ. ಎಚ್ ಬೆನಕನವಾರಿ ಎನ್. ಬಿ. ಪಾಟೀಲ್, ಶ್ರೀ ಜಿ.ಸಿ ಕಡೂರು ಶ್ರೀಮತಿ ಎಸ್. ಎಂ ಚಲವಾದಿ ಹಾಗೂ ಎಸ್.ಡಿ.ಎಂ.ಸಿಯ ಸರ್ವ ಸದಸ್ಯರು ಪ್ರಭಾರಿ ಮುಖ್ಯ ಗುರುಗಳಾದ ಸುನಿಲ ಪಾಟೀಲ ಗ್ರಾಮದ ಗುರುಹಿರಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉಪನ್ಯಾಸಕರಾದ ಶ್ರೀ ಎಸ್ ಎಸ್ ಆದಾಪುರ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು ಡಾ. ಸಂಗಮೇಶ.ಬಿ.ಹಂಚಿನಾಳ ಅತಿಥಿಗಳನ್ನು ಪರಿಚಯಿಸಿದರು.ಡಿ.ವಾಯ್.ಬುಡ್ಡಿಯವರ ಮಾಲಾರ್ಪಣೆ ಕಾರ್ಯಕ್ರಮ ನೆರವೇರಿಸಿ ಕೊಟ್ಟರು.ಡಾ.ಎ.ಎಮ್.ಗೊರಚಿಕ್ಕನವರ ನಿರೂಪಿಸಿದರು ಎನ್.ಎಸ್.ಎಸ್ ಯೋಜನಾಧಿಕಾರಿ ಶ್ರೀ ಜಿ.ಎಸ್ ಗೌಡರ ವಂದಿಸಿದರು ಈ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಾಲೇಜಿನ 50 ಶಿಬಿರಾಥಿ೯ ಸ್ವಯಂಸೇವಕರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ