ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಮನೆಗೆ ಲೋಕಾಯುಕ್ತ ದಾಳಿ

ಶಿವಮೊಗ್ಗ:ಪ್ರಕಾಶ್.ಜಿ.ಎನ್. ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ರವರು ತಮ್ಮ ಬಲ್ಲ ಮೂಲಗಳಿಂದ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯ್ದೆ-2018) ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.

ಪ್ರಕಾಶ್.ಜಿ.ಎನ್. ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ರವರು ಅಕ್ರಮ ಆಸ್ತಿಗಳಿಸಿರುವ ಪ್ರಕರಣದ ತನಿಖೆ ಕೈಗೊಂಡು ಶ್ರೀ ಪ್ರಕಾಶ್ ಜಿ.ಎನ್ ರವರಿಗೆ ಸಂಬಂಧಿಸಿದ 3 ಸ್ಥಳಗಳಲ್ಲಿ
ದಿ:19/07/2024 ರಂದು ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ಸ್ಥಳ ಶೋಧನೆ ಮಾಡಿದ್ದು, ಪ್ರಕಾಶ್ ಜಿ.ಎನ್ ರವರಿಗೆ ಸಂಬಂದಿಸಿದಂತೆ 1 ಖಾಲಿ ನಿವೇಶನ, 2 ಮನೆಗಳು, 2.8 ಎಕರೆ ಕೃಷಿ ಜಮೀನು ಅಂದಾಜು ಸ್ಥಿರಾಸ್ಥಿ ಮೌಲ್ಯ ರೂ 1,57,00,000/- ಕಂಡು ಬಂದಿರುತ್ತದೆ. ಹಾಗೂ ಅವರ ವಾಸದ ಮನೆಯಲ್ಲಿ ರೂ 38,32,630/- ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು, ಅಂದಾಜು 5,20,000/-ರೂ ಮೌಲ್ಯದ ವಾಹನಗಳು, ಅಂದಾಜು 11,30,000/-ರೂ ಮೌಲ್ಯದ ಗೃಹಪಯೋಗಿ ವಸ್ತುಗಳು ಮತ್ತು ರೂ 12,86,500/- ನಗದು ಹಣ ಪತ್ತೆಯಾಗಿರುತ್ತದೆ.

ನಂತರ ಈ ತನಿಖೆಯನ್ನು ಮುಂದುವರೆಸಿದ್ದು, ದಿ:20/07/2024 ರಂದು ಪ್ರಕಾಶ್ ಜಿ.ಎನ್ ರವರ ಪತ್ನಿ ಹೆಸರಿನಲ್ಲಿದ್ದ ಬ್ಯಾಂಕ್ ಲಾಕರ್ ಶೋಧನೆ ಮಾಡಲಾಗಿ ಈ ಬ್ಯಾಂಕ್ ಲಾಕರ್‍ನಲ್ಲಿ ರೂ,32,06,000/- ನಗದು ಹಣ ಮತ್ತು ಅಂದಾಜು ರೂ 18,48,200/- ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿರುತ್ತದೆ. ಈ ಅಧಿಕಾರಿಯು ಅಂದಾಜು 2,05,23,330/- ರೂ ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಹಾಗೂ ಅವರ ಮನೆ ಮತ್ತು ಲಾಕರ್ ನಲ್ಲಿ ಪತ್ತೆಯಾದ ನಗದು ರೂ 44,06,000/- ಗಳನ್ನು ತನಿಖೆ ಸಂಬಂದ ಅಮಾನತ್ತುಪಡಿಸಿಕೊಳ್ಳಲಾಗಿರುತ್ತದೆ. ಈ ಪ್ರಕರಣವನ್ನು ಶಿವಮೊಗ್ಗದ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಚೌದರಿ ಎಂ.ಹೆಚ್. ರವರು ದಾಖಲಿಸಿದ್ದು,ಹೆಚ್.ಎಸ್.ಸುರೇಶ್ ಪೊಲೀಸ್ ನಿರೀಕ್ಷಕರು, ಕ.ಲೋ ಶಿವಮೊಗ್ಗ ಇವರು ತನಿಖೆಯನ್ನು ಮುಂದುವರೆಸಿರುತ್ತಾರೆ.
ಈ ದಾಳಿ ಸಮಯಕ್ಕೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು, ಹಾಗೂ ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗಳು ಭಾಗಿಯಾಗಿರುತ್ತಾರೆ ಎಂದು ಲೋಕಾಯುಕ್ತ ಪೊಲೀಸ್ ಪ್ರಕಟಣೆ ತಿಳಿಸಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ