ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೆಲ್ಮೆಟ್ ಧರಿಸಿ ಜೀವ ಉಳಿಸಿ ಜಾಗೃತಿ ಹಾಗೂ ಸಾರಿಗೆ ವಾಹನಗಳ ತ್ರೈಮಾಸಿಕ ತೆರಿಗೆ ಭರಿಸುವ ಬಗ್ಗೆ ಜಾಥಾ ಕಾರ್ಯಕ್ರಮ

ಯಾದಗಿರಿ :ದೇಶದಲ್ಲಿ ಒಂದು ಗಂಟೆಗೆ ಶೇಕಡ 20ರಷ್ಟು ಅಪಘಾತದಲ್ಲಿ ಹೆಚ್ಚಿನ ಸಂಖ್ಯೆ ಯುವಕರೇ ಸಾವು ನೋವುಗೆ ಬಲಿಯಾಗುತ್ತಿದ್ದಾರೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮಿಲಿಂದ ಕುಮಾರ್ ಅವರು ತಿಳಿಸಿದರು.
ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಜಿಲ್ಲಾ ಮೋಟಾರ್ ವಾಹನ ತರಬೇತಿ ಶಾಲೆಯ ಮಾಲೀಕರ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಸೀಟ್ ಬೆಲ್ಟ್, ಹೆಲ್ಮೆಟ್ ಧರಿಸಿ ಜೀವ ಉಳಿಸಿ ಜಾಗೃತಿ ಹಾಗೂ ಸಾರಿಗೆ ವಾಹನಗಳ ತ್ರೈಮಾಸಿಕ ತೆರಿಗೆ ಬರಿಸುವ ಬಗ್ಗೆ ಜಾತ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿ ವಾಹನ ಚಾಲಕರು ತಮ್ಮ ವಾಹನಕ್ಕೆ ಸಂಬಂಧಿಸಿದ ನಿಯಮಾವಳಿಗಳನ್ನು ಪಾಲಿಸುತ್ತಾ ಅದೇ ರೀತಿ ಸಂಚಾರ ನಿಯಮಗಳನ್ನು ಪಾಲನೆ ಮಾಡುತ್ತಾ ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕೆಂದು ಹೇಳಿದರು.
ಕಡ್ಡಾಯವಾಗಿ ದ್ವಿಚಕ್ರ ವಾಹನ ಚಾಲಕರು ಹೆಲ್ಮೆಟ್ ಧರಿಸಬೇಕು ಹಾಗೂ ತಮ್ಮ ವಾಹನಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಚಾಲ್ತಿಯಲ್ಲಿ ಇಡಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮೋಟಾರ್ ವಾಹನ ನಿರೀಕ್ಷಕರಾದ ಅಯ್ಯಾಳಪ್ಪ, ಕಚೇರಿಯ ಸಿಬ್ಬಂದಿ ಶಿವಕುಮಾರ ನವಲೆ, ರಾಮಕೃಷ್ಣ ಮತ್ತು ಪ್ರಶಾಂತ, ನಗರ ಪೊಲೀಸ್ ಠಾಣೆ ಉಪನಿರೀಕ್ಷಕರಾದ ಶಾಮ್ ಸುಂದರ, ಮೋಟಾರ್ ವಾಹನ ತರಬೇತಿ ಶಾಲೆಯ ಜಿಲ್ಲಾಧ್ಯಕ್ಷ ಯಲ್ಲಪ್ಪ ದೊಡ್ಡಮನಿ, ಉಪಾಧ್ಯಕ್ಷ ಜುಬೇರ್ ಅಹಮದ್, ಕಾರ್ಯದರ್ಶಿ ಬಸಯ್ಯಸ್ವಾಮಿ, ಮೋಟಾರ್ ತರಬೇತಿ ಶಾಲೆಯ ಮಾಲೀಕರಾದ ಅಬ್ದುಲ್ ಅಜೀಜ್, ಅಬ್ದುಲ್ ಖದೀರ ಇನ್ನಿತರರು ಉಪಸ್ಥಿತರಿದ್ದರು.

ವರದಿ: ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ