ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುಂಗಾರು ಹಂಗಾಮಿನ ಬಿತ್ತನೆ

ಯಾದಗಿರಿ: 2024-25 ನೇ ಸಾಲಿನಲ್ಲಿ ಯಾದಗಿರಿ ಮತ್ತು ಗುರುಮಿಠಕಲ್ ತಾಲ್ಲೂಕಿನಲ್ಲಿ ಒಟ್ಟಾರೆಯಾಗಿ 1,18,616 ಹೆಕ್ಟರ್ ಪ್ರದೇಶದ ಬಿತ್ತನೆ ಗುರಿಯನ್ನು ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಈವರೆಗೆ 104005 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿರುತ್ತದೆ. ಅಂದರೆ ಶೇ% 87.68 ಪ್ರದೇಶದಲ್ಲಿ ಬಿತ್ತನೆಯಾಗಿರುತ್ತದೆ. 4711 ಹೆಕ್ಟರ್ ಪ್ರದೇಶದಲ್ಲಿ ಹತ್ತಿ, 28500 ಹೆಕ್ಟರ್ ಪ್ರದೇಶದಲ್ಲಿ ತೊಗರಿ, 15054 ಹೆಕ್ಟರ್ ಪ್ರದೇಶದಲ್ಲಿ ಹೆಸರು ಹಾಗೂ 12740 ಹೆಕ್ಟರ್ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದೆ. ಈವರೆಗಿನ ವಾಡಿಕೆ ಮಳೆ 325 ಮಿ.ಮೀ. ಇದ್ದು, ಅದರಲ್ಲಿ ಈಗಾಗಲೇ 310 ಮಿ.ಮೀ. ಮಳೆಯಾಗಿರುತ್ತದೆ. ಕಳೆದ ಒಂದು ವಾರದಿಂದ ಸತತವಾಗಿ ತುಂತುರು ಮಳೆ ಬರುತ್ತಿದ್ದು. ಬಿತ್ತನೆಯಾದ ತೊಗರಿ ಹಾಗೂ ಹೆಸರಿನ ಬೆಳೆಗಳು ಚೇತರಿಸಿಕೊಳ್ಳುತ್ತೀವೆ ಎಂದು ಯಾದಗಿರಿ ಸಹಾಯಕ ಕೃಷಿ ನಿರ್ದೇಶಕರು ಅವರು ತಿಳಿಸಿದ್ದಾರೆ.
ಕಪ್ಪು ಮಣ್ಣಿನಲ್ಲಿ ಬಿತ್ತನೆಯಾದ ಹೆಸರಿನ ಬೆಳೆಯು ಹೆಚ್ಚಿನ ತೇವಾಂಶದಿಂದ ಬಳಲುತ್ತಿದ್ದು, ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತಿವೆ. ಕಾರಣ ಹೊಲದ ಸುತ್ತವೂ ಒಂದು ಅಡಿ ಆಳದ ಬಸಿಗಾಲುವೆಯನ್ನು ತೆಗೆದು ನೀರನ್ನು ಹೊರ ಹಾಕಬೇಕು ಜೊತೆಗೆ ಪ್ರತಿ 10 ಮೀಟರ್ ಹಂತರದಲ್ಲಿ 1 ರಂತೆ ಒಂದು ಅಡಿ ಆಳದ ನೇಗಿಲ ಸಾಲು ತೆಗೆದು ನೀರು ಹೊರ ಹಾಕಿ. ನೀರಿನಲ್ಲಿ ಕರಗುವ 19:19:19 ಎನ್.ಪಿ.ಕೆ 10 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪಡಿಸಿ. ಹಳದಿ ರೋಗ ಹಾಗೂ ಎಲೆ ಮುದುಡು ರೋಗ ಕಂಡುಬಂದಲ್ಲಿ ಕಾರ್ಬೈಡೈಜಿಮ್ + ಮ್ಯಾನ್‌ಕೊಜೆಬ್ 3 ಗ್ರಾಂ ಹಾಗೂ ಥೈಯೊಮೆಥಾಕ್ಸಾಮ್ 0.5 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ವರದಿ: ಶಿವರಾಜ ಸಾಹುಕಾರ್ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ