ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೆದ್ದಾರಿಯಲ್ಲಿ ವಾಹನ ಡಿಕ್ಕಿ:ಕರಡಿ ಸಾವು

ಪಾವಗಡ:ಕಡಮಲಕುಂಟೆ ಹಾದುಹೋಗುವ ಸಣ್ಣ ಕೈಗಾರಿಕಾ ಘಟಕದ ಹತ್ತಿರ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಕರಡಿ ಮೃತಪಟ್ಟ ಘಟನೆ ನಡೆದಿದೆ.
ಕಡಮಲಕುಂಟೆ ಬಳಿ ಸಣ್ಣ ಕೈಗಾರಿಕೆಗಳ ಘಟಕ ಹತ್ತಿರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಅಪರಿಚಿತ ವಾಹನ ಕರಡಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದ ಕರಡಿ ಸ್ಥಳದಲ್ಲೇ ಸಾವನ್ನಪ್ಪಿದೆ.
ಪಾವಗಡ ತಾಲ್ಲೂಕಿನ ಕಡಮಲಕುಂಟೆ ಬಳಿ ಸಣ್ಣ ಕೈಗಾರಿಕೆಗಳ ಘಟಕ ಹತ್ತಿರ ಬೆಟ್ಟದ ತಬ್ಬಿಲಿನ ಪ್ರದೇಶದಲ್ಲಿ ಹೊಂದಿಕೊಂಡಂತೆ ಸುತ್ತಮುತ್ತ ಬೃಹತ್ ಕಲ್ಲು ಬಂಡೆಗಳ ಗುಡ್ಡಗಾಡು ಇರುವುದರಿಂದ ವನ್ಯಜೀವಿಗಳು ಆಹಾರಕ್ಕಾಗಿ ಒಂದು ಕಡೆಯಿಂದ ಮತ್ತೊಂದು ಕಡೆ ಓಡಾಡುವುದು ಸಾಮಾನ್ಯವಾಗಿದೆ. ಹೀಗಾಗಿ ಕರಡಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೆದ್ದಾರಿ ದಾಟುವ ವೇಳೆ ವಾಹನ ಡಿಕ್ಕಿ ಹೊಡೆದಿದೆ. ಅಪಘಾತ ರಭಸಕ್ಕೆ ಕರಡಿ ಹೆದ್ದಾರಿಯಲ್ಲೇ ಕೊನೆಯುಸಿರೆಳೆದಿದೆ ಮತ್ತೊಂದು ಕಡೆ ಇತ್ತೀಚಿನ ದಿನಗಳಲ್ಲಿ ಹೆದ್ದಾರಿಗಳಲ್ಲಿ ಕರಡಿ, ಜಿಂಕೆ ಇನ್ನಿತರ ಕಾಡುಪ್ರಾಣಿಗಳು ರಸ್ತೆ ಅಪಘಾತಕ್ಕೆ ಸಿಲುಕಿ ಮೃತಪಡುತ್ತಿರುವುದು ಪ್ರಾಣಿ ಪ್ರಿಯರಲ್ಲಿ ಆತಂಕ ಮೂಡಿಸಿದೆ.

ವರದಿ :ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ