ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸೊಳ್ಳೆಗಳ ಆವಾಸ ಸ್ಥಾನವಾದ ಶಾಲೆ:ಗಬ್ಬು ನಾರುತ್ತಿರುವ ಗಟಾರಗಳು

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ನಗರದ ಸರಕಾರಿ ಪ್ರಾಥಮಿಕ ಶಾಲೆ ನಂ 3 ರ ಶಾಲೆಯ ಹತ್ತಿರವಿರುವಂತಹ ಗಟ್ಟಾರಗಳು ತುಂಬಿ ಕೊಳೆತು ನಾರುತ್ತಿವೆ.

ಬೆಳಗಾದರೆ ಸಾಕು ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಓಡಾಡಲು ಸಹ ಬಹಳ ತೊಂದರೆಯಾಗುತ್ತಿದ್ದು, ಮಕ್ಕಳು ಕೆಸರು ತುಂಬಿದ ಗಟಾರಗಳಿಗೆ ಬೀಳುತ್ತಿದ್ದಾರೆ.

ಕೆಟ್ಟವಾಸನೆ ಬೀರುತ್ತಿದ್ದರೂ ಸಹ ಕ್ಯಾರೆ ಎನ್ನದ ಅಧಿಕಾರಿಗಳು ಮಕ್ಕಳಿಗೆ ಊಟ ಮಾಡಲು ಸಹ ಆಗದೇ ಇರುವಂತಹ ದುಸ್ಥಿತಿ ಎದುರಾಗಿದೆ.
ಸೊಳ್ಳೆಗಳ ಕಡಿತದಿಂದ ಮಕ್ಕಳು ಸಹ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಆದರೂ ಸಹ ಶಾಲೆಯ ಮುಂದೆ ಇರುವಂತಹ ಗಟಾರುಗಳನ್ನು ಸರಿಪಡಿಸುವ ನೆಪದಲ್ಲಿ ಪುರಸಭೆಯವರು ಗಟಾರವನ್ನು ಇನ್ನೂ ಸಹ ಅದೋ ಗತಿಗೆ ತಂದೊಡ್ಡಿದ್ದಾರೆ.

ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ಸರಿ ಪಡಿಸುತ್ತಾರೋ ಇಲ್ವೋ ಎಂದು ಕಾದು ನೋಡಬೇಕಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ