ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುಮಾರಿ ಭಾರತಿ ಅರ್ಜುನ ಪರೀಟರಿಗೆ ಸನ್ಮಾನ

ಬಾಗಲಕೋಟೆ:ತಾಲೂಕಿನ ಬೆನಕಟ್ಟಿಯ ಸದ್ಬೋಧನ ಪೀಠದ ದತ್ತು ವಿದ್ಯಾರ್ಥಿನಿ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದ ಕುಮಾರಿ ಭಾರತಿ ಅರ್ಜುನ ಪರೀಟ ಈಗ ಇಂಜನಿಯರಿಂಗ್ ಪದವಿ ಮುಗಿಸಿ ಸಾಪ್ಟವೇರ್ ಇಂಜನಿಯರಾಗಿ ಬೆಂಗಳೂರಿನಲ್ಲಿ ನೌಕರಿಗೆ ಸೇರಿಕೊಂಡಿದ್ದಾರೆ. ಇದು ನಮ್ಮ ಪೀಠಕ್ಕೆ ಹೆಮ್ಮೆಯ ಸಂಗತಿ. ನಮ್ಮ ಸಮಾಜದ ಹಿರಿಯ ವೈದ್ಯ, ಬಾಗಲಕೋಟೆಯ ಚಿಕ್ಕಮಕ್ಕಳ ತಜ್ಞ ಡಾ.ಆರ್.ಟಿ.ಪಾಟೀಲ ಅವರು ಈ ವಿದ್ಯಾರ್ಥಿಯ ಕಲಿಕೆಗೆ ಆರ್ಥಿಕ ಸಹಾಯ ನೀಡಿದ್ದರು. ರವಿವಾರ ಮೆಟಗುಡ್ಡ ಗ್ರಾಮದಲ್ಲಿ ಜರುಗಿದ ಸಮಾರಂಭದಲ್ಲಿ ಭಾರತಿ ಪರೀಟ ಅವಳನ್ನು ಗ್ರಾಮದ ಹೇಮ ವೇಮ ಸಂಘದ ಪರವಾಗಿ ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ಭಾರತಿ ನಮ್ಮ ಪೀಠಕ್ಕೆ ತನ್ನ ಮೊದಲ ತಿಂಗಳ ಸಂಬಳದಲ್ಲಿ 15000 ರೂಪಾಯಿಗಳನ್ನು ನಮ್ಮ ಪೀಠದ ಸಂಸ್ಥಾಪಕ ಅಧ್ಯಕ್ಷರಾಗಿದ್ದ, ದಿವಂಗತ ಡಾ.ಶಿವಣ್ಣ ಅಮಾತೆಪ್ಪನವರ ಅವರ ಪುತ್ರ, ಪೀಠದ ಸಂಚಾಲಕ ಮಾಲತೇಶ ಅಮಾತೆಪ್ಪನವರ ಅವರಿಗೆ ಭಾರತಿ 15000 ರೂಪಾಯಿಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪೂಜ್ಯರು, ಶರಣರು, ಗ್ರಾಮದ ಹಿರಿಯರಾದ ಶಿವನಗೌಡ ಪಾಟೀಲ, ಪೀಠದ ಕಾರ್ಯಕರ್ತರಾದ ರಮೇಶ ಅಣ್ಣಿಗೇರಿ, ಏಚ್.ಜಿ.ಹುದ್ದಾರ, ಈಶ್ವರ ಕೋಣಪ್ಪನವರ, ಶ್ರೀನಿವಾಸ ಬೆನಕಟ್ಟಿ ಹಾಗೂ ಭಾರತಿ ಅವರ ತಂದೆ ಅರ್ಜುನ ಪರೀಟ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ