ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುರಿಮರಿಯನ್ನು ಹೊತ್ತೊಯ್ದ ಚಿರತೆ

ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಒಂದು ಮೇಕೆ ಮತ್ತು ಒಂದು ಕುರಿಮರಿಯನ್ನೂ ಬಲಿ ಪಡೆದ ಚಿರತೆ ಕುರಿಮರಿಯನ್ನು ಹೊತ್ತೊಯ್ದಿರುವ ಘಟನೆ ತಾಲೂಕಿನ ಚಿಕ್ಕಿಂದುವಾಡಿ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಚಿಕ್ಕಿಂದುವಾಡಿ ಗ್ರಾಮದ ಕುಳ್ಳೆಗೌಡ ಎಂಬುವರು ತಮ್ಮ ಕೊಟ್ಟಿಗೆಯಲ್ಲಿ ಹಸು ಮೇಕೆ ಕುರಿಗಳನ್ನು ಕಟ್ಟಿಹಾಕಿದ್ದರು. ನಿನ್ನೆ ತಡರಾತ್ರಿ ಚಿರತೆ ದಾಳಿ ನಡೆಸಿ ಮೇಕೆಯೊಂದನ್ನು ಕಚ್ಚಿ ಸಾಯಿಸಿದೆ. ಮೆಕ್ಕೆಗೆ ಕಟ್ಟಿದ್ದ ಹಗ್ಗ ಗಟ್ಟಿಯಾಗಿದ್ದರಿಂದ ಅದನ್ನು ಎಳೆಯಲು ಸಾಧ್ಯವಾಗದಿದ್ದಾಗ ಪಕ್ಕದಲ್ಲಿ ಕಟ್ಟಿದ್ದ ಕುರಿಯನ್ನು (ಟಗರು)ಬಲಿಪಡೆ ಎಳೆದುಕೊಂಡು ಹೋಗಿದೆ.

ವಾರದ ಹಿಂದೆ ಕರಿಯನಪುರ ಗ್ರಾಮದ ಚಿಕ್ಕಸಿದ್ದಯ್ಯ ಎಂಬುವರು ಕುರಿ ಮೇಯಿಸುತ್ತಿದ್ದ ಸಮಯದಲ್ಲೆ ಕುರಿಯೊಂದನ್ನು ಕಚ್ಚಿಕೊಂಡು ಹೋಗಿತ್ತು. ಈ ಘಟನೆ ಮಾಡುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿರುವುದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಸುಮಾರು ಎರಡು ತಿಂಗಳಿನಿಂದಲೂ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗುತ್ತಿದೆ. ಗ್ರಾಮದ ರಾಮರಾವ್ ಎಂಬುವರ ತೋಟದ ಮನೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಹಾಗೂ ಅಕ್ಕ ಪಕ್ಕದ ಜಮೀನಿನ ರೈತರಿಗೂ ಕಾಣಿಸಿಕೊಂಡಿರುವ ಬಗ್ಗೆ ಈಗಾಗಲೇ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರೂ ಸಹ ಚಿರತೆ ಸೆರೆಹಿಡಿಯುವಲ್ಲಿ ಬೇಜವಾಬ್ದಾರಿ ತೋರಿಸುತ್ತಿದ್ದಾರೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ