ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೃತ ಪರಶುರಾಮ ಪಿ.ಎಸ್.ಐ ಪ್ರಕರಣ ಸಿ.ಐ.ಡಿ ತನಿಖೆಗೆ

ಯಾದಗಿರಿ: ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ದಿನಾಂಕ: 03.08.2024 ರಂದು ಮೃತ ಪರಶುರಾಮ ಪಿ.ಎಸ್.ಐ ಇವರ ಧರ್ಮ ಪತ್ನಿ ಶ್ರೀಮತಿ ಶ್ವೇತಾ ಎನ್.ವಿ ಇವರು ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಯಾದಗಿರಿ ಮತಕ್ಷೇತ್ರದ ಶಾಸಕರಾದ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಮತ್ತು ಅವರ ಪುತ್ರ ಪಂಪನಗೌಡ (ಸನ್ನಿಗೌಡ) ಇವರ ವಿರುದ್ದ ಪೊಲೀಸ್ ಠಾಣೆ ಗುನ್ನೆ ನಂ. 105/2024 ಕಲಂ: ಕಲಂ: 352, 108 ಸಂಗಡ 3(5) ಬಿ.ಎನ್.ಎಸ್-2023 ಮತ್ತು ಕಲಂ: 3 (1) (ಆರ್) (ಎಸ್), 3 (2) (v) ಎಸ್.ಸಿ/ಎಸ್.ಟಿ ಪಿ.ಎ ಎಕ್ಟ್-1989 ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು ಇರುತ್ತದೆ ಎಂದು ಯಾದಗಿರಿ ಪೊಲೀಸ್ ಅಧೀಕ್ಷಕರು ಅವರು ತಿಳಿಸಿದ್ದಾರೆ.

ಮಾನ್ಯ ಡಿ.ಜಿ ಮತ್ತು ಐ.ಜಿ.ಪಿ ಕರ್ನಾಟಕ ರಾಜ್ಯ ಬೆಂಗಳೂರು ರವರು ಸದರಿ ಪ್ರಕರಣದ ಕಡತವನ್ನು ಮುಂದಿನ ತನಿಖೆ ಕುರಿತು ಸಿ.ಐ.ಡಿ ಘಟಕ ಬೆಂಗಳೂರು ರವರಿಗೆ ವಹಿಸುವಂತೆ ಆದೇಶ ಮಾಡಿದ್ದು ಇರುತ್ತದೆ. ಮಾನ್ಯ ಡಿ.ಜಿ ಮತ್ತು ಐ.ಜಿ.ಪಿ ರವರ ಆದೇಶದ ಪ್ರಕಾರ ಪ್ರಕರಣದ ಕಡತವನ್ನು ಮುಂದಿನ ತನಿಖೆ ಕುರಿತು ಸಿ.ಐ.ಡಿ ಘಟಕ ಬೆಂಗಳೂರು ರವರಿಗೆ ನಾಳೆ ದಿನಾಂಕ: 05.08.2024 ರಂದು ವರ್ಗಾಯಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ