ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆರ್ ಜೆ ಹಂಟ್ ಯಶಸ್ವಿ

ಶಿವಮೊಗ್ಗ:ಮಲೆನಾಡು ಸೀಮೆಯ ಜನಪ್ರಿಯ ವಾಹಿನಿ ರೇಡಿಯೋ ಶಿವಮೊಗ್ಗ 90.8 ಎಫ್ ಎಮ್ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಆರ್ ಜೆ ಹಂಟ್ ನಡೆಸಿತು. ಇದರಲ್ಲಿ ವಿವಿಧ ಪದವಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಪರಿಸರ ಕೇಂದ್ರದ ಪದಾಧಿಕಾರಿ, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಪ್ರೊ. ಎ.ಎಸ್. ಚಂದ್ರಶೇಖರ್ ರೇಡಿಯೋ ಮಹತ್ವ, ವಿದ್ಯಾರ್ಥಿಗಳು ಇದನ್ನು ಸದಾವಕಾಶವಾಗಿಸಿಕೊಳ್ಳುವ ಬಗೆಯನ್ನು ವಿಸ್ತೃತವಾಗಿ ತಿಳಿಸಿದರು.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ರಾಜ್ಯ ಉಪಾಧ್ಯಕ್ಷೆ ಭಾರತೀ ಚಂದ್ರಶೇಖರ್ ರೇಡಿಯೋದ ಜೊತೆಗಿನ ತಮ್ಮ ನಂಟಿನ ಬಗ್ಗೆ ತಿಳಿಸಿ, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯೆ ಡಾ.ರಾಜೇಶ್ವರಿ ಮಾತನಾಡಿ, ರೇಡಿಯೋ ಶಿವಮೊಗ್ಗದ ಉತ್ಸಾಹಿ ತಂಡ ಕಾಲೇಜಿಗೆ ಬಂದಿರುವುದು ಸಂತಸ ತಂದಿದೆ. ವಿವಿಧ ಕಾಲೇಜಿನ ವಿದ್ಯಾರ್ಥಿಗಳಿಗೆ ಅಪೂರ್ವ ಅವಕಾಶ ದೊರೆಯಲಿದೆ. ದೊರೆತ ಅವಕಾಶವನ್ನು ಉಪಯೋಗಿಸಿಕೊಂಡು, ಬದುಕಿನಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಳ್ಳಬೇಕೆಂದು ಶುಭ ಕೋರಿದರು.

ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್, ಬಾನುಲಿ ಸಂಯೋಜಕ ಗುರುಪ್ರಸಾದ್ ಬಾಲಕೃಷ್ಣ, ಕಾರ್ಯಕ್ರಮ ಸಂಯೋಜಕ ಕೆ.ವಿ. ಅಜೇಯ ಸಿಂಹ, ಪರಿಸರ ಅಧ್ಯಯನ ಕೇಂದ್ರದ ಸಂಯೋಜಕ ದಿನೇಶ್ ಹೊಸನಗರ, ಆರ್ ಜೆ ಗಳಾದ ಶ್ರೀಧರ್, ಮಹಾಲಕ್ಷ್ಮೀ, ಶ್ವೇತಾ, ಅರ್ಪಿತಾ ಸಂದರ್ಶನ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

ಉಪನ್ಯಾಸಕ ಪರಿಸರ ನಾಗರಾಜ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದು, ಸಹಕರಿಸಿದರು.

ಈ ಆಡಿಷನ್ ಆಯೋಜನೆಯಲ್ಲಿ ಕೊಡಚಾದ್ರಿ ಇಂಟಿಗ್ರೆಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ, ಪರಿಸರ ಅಧ್ಯಯನ ಕೇಂದ್ರವು ಸಹಭಾಗಿಗಳಾಗಿತ್ತು.

ವರದಿ:ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ