ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಾಡೋನಹಳ್ಳಿ ತುಂಗಾಭದ್ರಾ ನದಿಗೆ ಸೋಪಾನಕಟ್ಟೆ, ರಸ್ತೆ ನಿರ್ಮಾಣಕ್ಕೆ ಬಲ್ಕೀಷ್ ಭಾನುರವರಿಗೆ ಮನವಿ

ಶಿವಮೊಗ್ಗ : ಶಿವಮೊಗ್ಗ ತಾಲೂಕು ಹಾಡೋನಹಳ್ಳಿ ಗ್ರಾಮದಲ್ಲಿರುವ ತುಂಗಭದ್ರಾ ನದಿಯ ಸೋಪಾನಕಟ್ಟೆ ಹಾಗೂ ಗ್ರಾಮದಿಂದ ನದಿಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ಅದನ್ನು ಸಿದ್ಧಪಡಿಸಿಕೊಡಲು ಅನುದಾನ ಬಿಡುಗಡೆ ಮಾಡಿಸುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಡಿಸಿ ಜಗದೀಶ್ವರ್ ನೂತನ ವಿಧಾನ ಪರಿಷತ್ ಸದಸ್ಯರಾದ ಬಲ್ಕಿಶ್ ಬಾನು ಅವರಿಗೆ ಮನವಿ ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ನೂತನ ಶಾಸಕರಿಗೆ ಸನ್ಮಾನಿಸಿದ ಅವರು ಸುಮಾರು ವರ್ಷಗಳಿಂದ ಹಾಡೋನಹಳ್ಳಿ ಗ್ರಾಮದ ಜನತೆ ತುಂಗಭದ್ರ ನದಿಯ ಸೋಪಾನಕಟ್ಟೆಯನ್ನು ಬಳಸಿಕೊಳ್ಳಲು ಆಗುತ್ತಿಲ್ಲ. ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ಮೆಟ್ಟಿಲು ಮಾರ್ಗದ ಈ ರಸ್ತೆಯ ಸಮಗ್ರ ದುರವಸ್ತಿ ಹಾಗೂ ಹೊಸ ಮಾರ್ಗ ನಿರ್ಮಾಣ ಮಾಡುವ ಜೊತೆಗೆ ಸೋಪಾನಕಟ್ಟೆಯನ್ನು ಗ್ರಾಮದ ಜನತೆ ಬಳಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲು ಕೋರಿದರು. ಸಕಾರಾತ್ಮಕವಾಗಿ ಸ್ಪಂದಿಸಿದ ವಿಧಾನ ಪರಿಷತ್ ಶಾಸಕರಾದ ಬಲ್ಕೀಷ್ ಭಾನು ಅವರು ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸರ್ಕಾರದ ಮಟ್ಟದಲ್ಲಿ ಕಾಮಗಾರಿ ಕೈಗೊಳ್ಳಲು ವಿನಂತಿಸುವುದಾಗಿ ಹಾಗೂ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಕೆ. ಎಸ್. ಈಶ್ವರಪ್ಪ, ಹೆಎಚ್.ಎಂ. ಮಧು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ