ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜನಸಾಮಾನ್ಯರಿಗೆ ಸ್ವಚ್ಚತೆ ಕುರಿತು ಅರಿವು ಮೂಡಿಸಿ: ಸಿಪಿಐ ಸುರೇಶ್

ಕೊಪ್ಪಳ:ಗ್ರಾಮೀಣ ಭಾಗದ ಜನ ಸಾಮಾನ್ಯರಿಗೆ ಸ್ವಚ್ಛತೆಯ ಕುರಿತು ಅರಿವು ಮೂಡಿಸಲು ಕೊಪ್ಪಳ ಗ್ರಾಮೀಣ ಸಿಪಿಐ ಸುರೇಶ ಡಿ ವಿದ್ಯಾರ್ಥಿಗಳಿಗೆ ಕರೆಕೊಟ್ಟರು.
ತಾಲೂಕಿನ ಓಜನಹಳ್ಳಿ ಗ್ರಾಮದ ಮಾರುತೇಶ ದೇವಾಲಯದ ಆವರಣದಲ್ಲಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಆಯೋಜಿಸಿದ್ದ ರಾಷ್ಟೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು ‘ಪ್ರಿವೆನ್ಶನ್ ಈಜ್ ಬೆಟರ್ ದ್ಯಾನ್ ಕ್ಯುರ್’ ಎನ್ನುವ ಆರೋಗ್ಯ ಕುರಿತಾದ ಮಾತು ಸದಾ ಪ್ರಚಲಿತ. ಆರೋಗ್ಯವಿದ್ದರೆ ಎಲ್ಲವೂ ಸಾಧ್ಯ. ಅದಕ್ಕಾಗಿ ‘ಆರೋಗ್ಯವೇ ಭಾಗ್ಯ’ ಎನ್ನುವುದು ಸ್ಪಷ್ಟವಾಗಿದೆ. ಆರೋಗ್ಯ ಎಂದರೆ ನಮ್ಮ ಮನೆ ಅಷ್ಟೆ ಅಲ್ಲ; ನಮ್ಮ ಸುತ್ತ ಮುತ್ತಲಿನ ವಾತಾವರಣವಾಗಿದೆ.
ಅದರ ಸ್ವಚ್ಛತೆ ಕುರಿತು ಮಕ್ಕಳಾದಿಯಾಗಿ ಶ್ರಮವಹಿಸಲು ಹೇಳಿದರು.

ಮುಂದುವರೆದು ಮಾತನಾಡಿದ ಅವರು ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮನೋಭಾವ ಸದ್ಯದ ದಿನಗಳಲ್ಲಿ ಬಹಳ ಮಹತ್ವದ್ದಾಗಿದೆ. ಹಾಗಾಗಿ ಪ್ರತಿನಿತ್ಯ ಪತ್ರಿಕೆ, ನಿಯತಕಾಲಿಕೆ ಮತ್ತು ಪಠ್ಯ ಪುಸ್ತಕ ಓದಲು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ ಸಮಾಜಸೇವೆ ಅನ್ನುವುದು ಕಲಿಯುವುದಲ್ಲ; ಅದು ಸ್ವಯಂ ಕಲಿಕೆಯಿಂದ ಬರುವಂತಹದ್ದು, ಹಾಗಾಗಿ ಮೈಗೂಡಿಸಿಕೊಳ್ಳಲು ಕರೆ ನೀಡಿದರು.
ನಿವೃತ್ತ ಪ್ರಾಚಾರ್ಯ ಬಿ ಜಿ ಕರಿಗಾರ ಮಾತನಾಡಿ ಹಿರಿಯರನ್ನು ಗೌರವಿಸಿ, ಉಪಚರಿಸಲು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಿವಬಸಪ್ಪ ಹಂಚಿನಾಳ ಮಾತನಾಡಿ ಗ್ರಾಮದ ಸಮಸ್ತ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಉಡಚಪ್ಪ ಭೋವಿ, ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಗೆ ಸಂಪೂರ್ಣ ಸಹಕಾರ ನೀಡಲು ಹೇಳಿದರು.

ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಕೆ ಲಮಾಣಿ ಅಧ್ಯಕ್ಷತೆ ವಹಿಸಿ ಮಕ್ಕಳಲ್ಲಿ ಪರಿಸರ ಕಾಳಜಿ ಮತ್ತು ಸಮಾಜ ಸ್ವಾಸ್ತ್ಯದ ಅರಿವು ಮುಖ್ಯ ಎಂದು ಹೇಳಿದರು. ಮಹಾತ್ಮಾ ಗಾಂಧಿ ಆ ದಿನಗಳಲ್ಲಿಯೇ ಸ್ವಚ್ಛತೆಗೆ ಬಹಳ ಆದ್ಯತೆ ನೀಡಿದ್ದರು. ಗಾಂಧಿ ಮಾರ್ಗ ಆರೋಗ್ಯ ಮಾರ್ಗ ಎಂದರು.
ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ವಿಠೋಬ ಎಸ್, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪ್ರದೀಪಕುಮಾರ್ ಯು,ಭೂಗೋಳ ಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಅಶೋಕ ಕುಮಾರ್ ಗ್ರಾಮ ಪಂಚಾಯಿತಿ ಸದಸ್ಯರಾದ ದ್ಯಾಮನಗೌಡ ಮಾಲಿ ಪಾಟೀಲ, ಶಶಿಕಲಾ ಮಂಜಪ್ಪ ಈಶ್ವರಗೌಡ್ರ ಮತ್ತು ಗ್ರಾಮದ ಮುಖಂಡರು ವೇದಿಕೆಯ ಮೇಲಿದ್ದರು. ಸಹಾಯಕ ಶಿಬಿರಾಧಿಕಾರಿಗಳಾದ ಶಿವಪ್ಪ ಬಡಿಗೇರ, ಕಲ್ಲಯ್ಯ ವೀ ಪೂಜಾರ್, ವಿರುಪಾಕ್ಷಪ್ಪ ಮುತ್ತಾಳ,ಎಚ್ ಜಿ ಬೊಮ್ಮನಾಳ, ಡಾ. ಆರತಿ ವಿ ಸಜ್ಜನ್,ಲಕ್ಷ್ಮಿ ಹಾಗೂ ತಾರಾಮತಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಡಾ.ನರಸಿಂಹ ಗುಂಜಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಎನ್ ಎಸ್ ಎಸ್ ವಿದ್ಯಾರ್ಥಿನಿ ಕು.ದ್ರಾಕ್ಷಾಯಿಣಿ ಸ್ವಾಗತಿಸಿದರು, ಕು. ಮಂಜುಳಾ ಮುಕ್ಕುಂಪಿ ಕಾರ್ಯಕ್ರಮ ನಿರೂಪಿಸಿದರೆ, ಕೊನೆಯಲ್ಲಿ ಸ್ವಾತಿ ವಂದಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ