ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಾನಕಿರಾಮ್‌ರವರಿಗೆ ಮನವಿ ಪತ್ರ ಸಲ್ಲಿಕೆ

ಪಾವಗಡ:ಜನ ವಸತಿ ಪ್ರದೇಶ ಮತ್ತು ದೇವಸ್ಥಾನದ ದಾರಿಯನ್ನು ಖಾಸಗಿ ವ್ಯಕ್ತಿಯೊಬ್ಬರು ಮುಚ್ಚಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದಾರೆ, ಈ ಹಿನ್ನೆಲೆಯಲ್ಲಿ ದಾರಿಯನ್ನು ಬಿಡಿಸಿಕೊಡುವಂತೆ ಕೆ.ರಾಮಪುರ ಗ್ರಾಮಸ್ಥರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಾದ ಜಾನಕಿರಾಮ್‌ರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ತಾಲೂಕು ಪಂಚಾಯಿತಿ ಆವರಣದಲ್ಲಿ ದಾರಿ ಬಿಡಿಸಿ ಕೊಡುವಂತೆ ಮನವಿ ಪತ್ರ ಸಲ್ಲಿಸಿದ ಬಳಿಕ ಮುಖಂಡರಾದ ಎ.ಗೋಪಿ ರವರು ಮಾತನಾಡಿ ಅನಾದಿಕಾಲದಿಂದಲೂ ಜನ ವಸತಿ ಪ್ರದೇಶಕ್ಕೆ ಹಾಗೂ ಜಮೀನುಗಳಿಗೆ, ದೇವಸ್ಥಾನಕ್ಕೆ ದಾರಿ ಇತ್ತು ಆದರೆ ಆದಿನಾರಾಯಣ ಎಂಬುವವರು ದಾರಿಯಲ್ಲಿ ಕಲ್ಲು ಬಂಡೆಗಳನ್ನು ಹಾಕಿ ನಿತ್ಯ ಜನತೆಗೆ ಓಡಾಡಲು ಬೀಡದೇ ಅಡ್ಡಿ ಪಡಿಸುತ್ತಿದ್ದಾರೆ, ಇದೇ ವಿಚಾರವಾಗಿ ಕಳೆದ ಎರಡು ವರ್ಷಗಳ ಹಿಂದೆ ನಮ್ಮ ಗ್ರಾಮದಲ್ಲಿ ನಡೆದ “ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ” ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವರದರಾಜುರವರು ಸ್ಥಳ ಪರಿಶೀಲಿಸಿ ತಕ್ಷಣ ಜನತೆಗೆ ಓಡಾಡಲು ದಾರಿಯನ್ನು ಬಿಡುವಂತೆ ಸೂಚಿಸಿದ್ದರು, ಆದರೆ ಎರಡು ವರ್ಷಗಳೇ ಕಳೆದರೂ ಇಂದಿಗೂ ದಾರಿ ಬಿಟ್ಟಲ್ಲ ಇದರಿಂದ ನಮಗೆ ಬಹಳ ತೊಂದರೆಯಾಗುತ್ತಿದೆ, ಆದ್ದರಿಂದ ಸಾರ್ವಜನಿಕರಿಗೆ ಓಡಾಡಲು ದಾರಿ ಬಿಡಿಸಿ ಕೊಡುವಂತೆ ಮನವಿ ಮಾಡಿದರು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಕಾರ್ಯ ನಿರ್ವಾಹಣಾಧಿಕಾರಿ ಜನ ವಸತಿ ಪ್ರದೇಶದಲ್ಲಿ ಜನತೆಗೆ ಓಡಾಡಲು ಯಾರು ಕೂಡಾ ಅಡ್ಡಿ ಪಡಿಸುವಂತಿಲ್ಲ, ಸ್ಥಳ ಪರಿಶೀಲನೆ ನಡೆಸಿ ದಾಖಲೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಕೃಷ್ಣಪ್ಪ, ಹನುಮಂತರಾಯ, ರಾಮಲಿಂಗಪ್ಪ, ಬಲರಾಮ, ರಾಮಾಂಜಿನೇಯ, ಉಷರಾಣಿ, ರತ್ನಮ್ಮ, ಮುತ್ಯಾಲಮ್ಮ ಉಪಸ್ಥಿತರಿದ್ದರು.

ವರದಿ:ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ