ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಕಾಪೂರ ಗ್ರಾಮದ ಸರಕಾರಿ ಪ್ರೌಢ ಶಾಲೆ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಕಲ್ಯಾಣ ಕರ್ನಾಟಕ ಭಾಗದ ಪರಿಸರ ರಕ್ಷಕರು, ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರ 36ನೇ ಹುಟ್ಟು ಹಬ್ಬ ಹಾಗೂ ವನಮಹೋತ್ಸವ ಕಾರ್ಯಕ್ರಮವನ್ನು 36 ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ವಹಿಸಿದ್ದರು ಹಾಗೂ ಶ್ರೀ ಮತಿ ರಾಜೇಶ್ವರಿ ವಿಜ್ಞಾನ ಶಿಕ್ಷಕರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಅಮರೇಗೌಡ ಮಲ್ಲಾಪೂರ ಮಾತನಾಡಿ ಸರಕಾರಿ ಶಾಲೆಗಳನ್ನು ಹಸಿರುಕರಣಗೊಳಿಸುವುದು ಮತ್ತು ಕಲ್ಯಾಣ ಕರ್ನಾಟಕ ಬಿಸಲ ನಾಡನ್ನು ಹಸಿರು ನಾಡಾಗಿ ಪರಿವರ್ತನೆ ಮಾಡುವುದೇ ನನ್ನ ಮುಖ್ಯ ಗುರಿಯಾಗಿದೆ ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ.ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಗಿಡಮರಗಳ ಉಳಿವಿಗಾಗಿ ಪಣತೊಡಬೇಕು ಎಂದರು.
ಈ ಸಂದರ್ಭದಲ್ಲಿ ಅಮರೇಗೌಡ ಮಲ್ಲಾಪೂರ,ಶಂಕರಗೌಡ ಎಲೆಕೂಡ್ಲಿಗಿ,ಗಿರಿಸ್ವಾಮಿ ಹೆಡಗಿನಾಳ,ಚನ್ನಪ್ಪ ಕೆ.ಹೊಸಹಳ್ಳಿ,ಮುದಿಯಪ್ಪ ಹೊಸಳ್ಳಿ ಕ್ಯಾಂಪ್, ವೀರಭದ್ರಯ್ಯ ಸ್ವಾಮಿ ತಿಮ್ಮಾಪೂರ,SDMC ಅಧ್ಯಕ್ಷ ಅಂಬಣ್ಣ ದೇವರಮನಿ, ಕೆ.ಮುಖ್ಯೋಪಾಧ್ಯಾಯರು, ಶಿಕ್ಷಕರಾದ ಮಲ್ಲಿಕಾರ್ಜುನಯ್ಯ ಸ್ವಾಮಿ,ರಾಜೇಶ್ವರಿ,ವೆಂಕೋಬ,ಶೈನಾಜ್ ಬೇಗಂ, ರಾಜಶೇಖರಗೌಡ, ನಾಗರಾಜ,ವೀರೇಶ,ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




















