ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಡಪದ ಅಪ್ಪಣ್ಣ ಸಮಾಜದ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಿಸಿ ಅನುದಾನ ಬಿಡುಗಡೆಗೆ ಡಾ.ಎಂ ಬಿ ಹಡಪದ ಆಗ್ರಹ

ಕಲಬುರಗಿ: ಕರ್ನಾಟಕ ರಾಜ್ಯ ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅಧ್ಯಕ್ಷರನ್ನು ನೇಮಕ ಮಾಡಿ ಅನುದಾನ ಒದಗಿಸಬೇಕು ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ಸರ್ಕಾರಕ್ಕೆ ಒತ್ತಾಯಿಸಿದರು. ಕಲಬುರಗಿ ನಗರದ ಪತ್ರಿಕಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2023ರ ಮಾರ್ಚ ನಲ್ಲಿ ಹಡಪದ ಅಪ್ಪಣ್ಣ ಸಮುದಾಯದ ಪ್ರತ್ಯೇಕ ಅಭಿವೃದ್ಧಿ ನಿಗಮ ರಚನೆಯಾಗಿದ್ದು,ಇಲ್ಲಿಯವರೆಗೂ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿಲ್ಲ ಹಾಗೂ ನಯಾ ಪೈಸೆ ಹಣ (ಅನುದಾನ) ಸಹ ಬಿಡುಗಡೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಹಡಪದರು ತೀರಾ ಹಿಂದುಳಿದ ಸಮುದಾಯಕ್ಕೆ ಸೇರಿದವರು ಎಂಬ ಹಣೆಪಟ್ಟೆ ಮಾತ್ರ ಇದೆ.ಆದಾಗ್ಯೂ, ಸರ್ಕಾರದವರು ಹಿಂದುಳಿದ ವರ್ಗದವರಿಗೆ ನೀಡುವ ಸೌಲಭ್ಯಗಳಿಂದ ನಮ್ಮ ಸಮುದಾಯ ವಂಚಿತವಾಗುತ್ತಿದೆ. ಕಾರಣ ನಾವು ಕರ್ನಾಟಕದಲ್ಲಿ ಹಿಂದುಳಿದ ವರ್ಗದವರಲ್ಲಿ ಅತೀ ಹಿಂದುಳಿದ ಸಮುದಾಯದವರಾಗಿದ್ದೇವೆ. ಹೀಗಾಗಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಬಹಳ ಹಿಂದುಳಿದಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ನಮ್ಮನ್ನು ಒಳಗೊಂಡಂತೆ ಈಗಾಗಲೇ ಕರ್ನಾಟಕ ರಾಜ್ಯಾದ್ಯಂತ ಅನೇಕ ಬಾರಿ ಹಡಪದ ಅಪ್ಪಣ್ಣ ಸಮುದಾಯದಿಂದ ಪ್ರತಿಭಟನೆಯನ್ನು ಮಾಡಿದ್ದೇವೆ. ನಿವೇದನೆ ಪತ್ರವನ್ನು ಮುಖ್ಯಮಂತ್ರಿಗಳಿಗೂ ಸೇರಿ ಸಂಬಂಧಿಸಿದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಕೊಟ್ಟಿದ್ದೇವೆ. ಆದಾಗ್ಯೂ,ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ಹಾಗೂ ಪ್ರತಿಫಲ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಹಿಂದುಳಿದ ನಾಯಕರೆಂದೇ ಖ್ಯಾತಿ ಹೊಂದಿರುವ ಸಿದ್ಧರಾಮಯ್ಯ ಅವರು ಕೂಡಲೇ ನಮ್ಮ ಹಡಪದ ಅಪ್ಪಣ್ಣ ಸಮಾಜದ ಪ್ರತ್ಯೇಕ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿ, ಈ ನಿಗಮಕ್ಕೆ 50 ಕೋಟಿ ರೂಪಾಯಿಗಳು ಅನುದಾನ ಬಿಡುಗಡೆ ಮಾಡಬೇಕು ಮತ್ತು ಬಸವಕಲ್ಯಾಣ ದಲ್ಲಿ ಇರುವ ಬಸವಣ್ಣನವರ ಅರಿವಿನ(ಗವಿ) ಮನೆಯ ಪಕ್ಕದಲ್ಲಿ ನಿಜಸುಖಿ ಹಡಪದ ಅಪ್ಪಣ್ಣ ನವರ ಅರಿವಿನ ಮನೆ(ಗವಿ) ಯನ್ನು ಬಿಕೆಡಿಬಿ ಯ ಪ್ರಾಧಿಕಾರಕ್ಕೆ ಸೇರಿಸಿ ಅಭಿವೃದ್ಧಿ ಪಡಿಸಲು ಕಲ್ಯಾಣ ನಾಡಿಗೆ ಶರಣ ಹಡಪದ ಅಪ್ಪಣ್ಣನವರ ಗವಿ ಅಭಿವೃದ್ಧಿ ಪಡಿಸಲು 5 ಕೋಟಿ ರೊ ಅನುದಾನ ಬಿಡುಗಡೆ ಮಾಡಬೇಕು. ಮತ್ತು ನಿಜಸುಖಿ ಹಡಪದ ಅಪ್ಪಣ್ಣ ನವರ ಜನ್ಮಸ್ಥಳ ಮಸಬಿನಾಳ ಹಾಗೂ ಹಡಪದ ಅಪ್ಪಣ್ಣನವರ ಧರ್ಮಪತ್ನಿಯ ಜನ್ಮಸ್ಥಳ ದೇಗಿನಾಳ ಅನ್ನು ಕೂಡಲಸಂಗಮ ಪ್ರಾಧಿಕಾರಕ್ಕೆ ಸೇರಿಸಿ ಅಭಿವೃದ್ಧಿ ಪಡಿಸಲು ಸರ್ಕಾರ ಬದ್ದವಾಗಿ ಈ ಬಹು ದಿನಗಳ ಬೇಡಿಕೆಯನ್ನು ಪೂರೈಸಲು ಸರ್ಕಾರಕ್ಕೆ ಮನವಿ, ಮತ್ತು ಹಡಪದ ಅಪ್ಪಣ್ಣ ಸಮಾಜದ ಜನತೆಗೆ ಜಾತಿ ನಿಂದನೆ ಪದ ಬಳಕೆ ಮಾಡುವ ಜನತೆಗೆ (ಕಾನೂನು) ಪ್ರಕಾರ ಅಟ್ರಾಸಿಟಿ ಕಾನೂನು ಜಾರಿಗೆ ತರುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈ ಸಮುದಾಯ ಬೇಡಿಕೆ ಇಡೇರಿಸಿ ಎಂದು ಅವರು ಒತ್ತಾಯಿಸಿದರು.ಈ ಕನ್ನಡ ದಿನ ಪತ್ರಿಕೆಯ ಮೂಲಕ ಸುದ್ದಿ ತಿಳಿಸಿದರು. ಸಮಾಜದ ಪ್ರಮುಖರಾದ-ಬಸವರಾಜ ಹಡಪದ ಹಳ್ಳಿ ರಾಜ್ಯ ಸಂಘಟನಾ ಕಾರ್ಯದರ್ಶಿ,ಕಲಬುರಗಿ ಜಿಲ್ಲೆಯ ಗೌರವಾಧ್ಯಕ್ಷರು -ಬಸವರಾಜ ಹಡಪದ ಸುಗೂರ ಎನ್. ಕಲಬುರಗಿ ಜಿಲ್ಲಾಧ್ಯಕ್ಷರು ಈರಣ್ಣ ಸಿ ಹಡಪದ ಸಣ್ಣೂರ ಮತ್ತು ಕಲಬುರಗಿ ಜಿಲ್ಲೆಯ ಕಾರ್ಯಾಧ್ಯಕ್ಷರು-ಭಗವಂತ ಶಿಕ್ಷಕರು ಕಿರಣಗಿ, ಕಲಬುರಗಿ ಜಿಲ್ಲಾ ಪ್ರ.ಕಾರ್ಯದರ್ಶಿ ರಮೇಶ ಹಡಪದ ನೀಲೂರ, ಕಲಬುರಗಿ ಜಿಲ್ಲೆಯ ಉಪಾಧ್ಯಕ್ಷರು ರುದ್ರಮಣಿ ಅಪ್ಪಣ ಬಟಗೇರಾ ಹಾಗೂ ಕಲಬುರಗಿ ಜಿಲ್ಲೆಯ ನಗರಾಧ್ಯಕ್ಷ ಮಲ್ಲಿಕಾರ್ಜುನ ಹಡಪದ ಸಾವಳಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ