ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗುಣ ಮಟ್ಟದ ಬ್ಯಾರಿಕೇಡ್ ಅಳವಡಿಸಿ ಶಾಸಕ ಎಂ. ಆರ್ ಮಂಜುನಾಥ್ ತಾಕೀತು

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ನಡೆಯುತ್ತಿರುವ ಕೆಶಿಪ್ ರಸ್ತೆ ಕಾಮಗಾರಿಯ ಬ್ಯಾರಿ ಕೇಡ್ ಗುಣಮಟ್ಟದಿಂದ ಅಳವಡಿಸಿ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಬಿಲ್ ತಡೆಹಿಡಿಯಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಂ.ಆರ್. ಮಂಜುನಾಥ್ ಸೂಚನೆ ನೀಡಿದರು.
ಹನೂರು ಪಟ್ಟಣದ ಪ್ರಮುಖ ಮುಖ್ಯ ರಸ್ತೆ ಎರಡು ಬದಿಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ನಿರ್ಮಾಣ ಮಾಡುತ್ತಿರುವ ಬ್ಯಾರಿಕೇಡ್ ನಿರ್ಮಾಣ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಪಟ್ಟಣದ ಆರ್ ಎಸ್ ದೊಡ್ಡಿ ಬಳಿ ಜರುಗಿತು.

108 ಕೋಟಿ ವೆಚ್ಚದ ಕೆಸಿಎಫ್ ರಸ್ತೆ ಕಾಮಗಾರಿ ಪರಿಶೀಲಿಸಿದ ನಂತರ ಗುತ್ತಿಗೆದಾರರ ಜೊತೆ ಮಾತನಾಡಿದ ಅವರು ಎರಡು ರಸ್ತೆ ಬದಿಯಲ್ಲಿ ಮಾಡಲಾಗುತ್ತಿರುವ ಬ್ಯಾರಿಕೇಡ್ ಗುಣಮಟ್ಟದಿಂದ ಕೂಡಿಲ್ಲ ಜೊತೆಗೆ ಅದಕ್ಕೆ ಬಣ್ಣ ಬಳಿಯುತ್ತಿರುವುದು ಮಣ್ಣು ಮತ್ತು ಎರಡು ಬದಿಯಲ್ಲಿರುವ ಧೂಳನ್ನು ಸ್ವಚ್ಛಗೊಳಿಸಲು ಬೆಳೆಯುತ್ತಿರುವ ಬಣ್ಣ ಸಹ ಕಳಪೆ ಮಟ್ಟದ್ದು ಹೀಗಾಗಿ ನಡೆಯುತ್ತಿರುವ ಕಾಮಗಾರಿ ಉತ್ತಮ ಗುಣಮಟ್ಟದ ಪೈಪ್‌ಗಳನ್ನು ಬಳಸಿ ಬ್ಯಾರಿಕೇಡ್ ನಿರ್ಮಾಣ ಮಾಡಬೇಕು ಕಳಪೆ ಗುಣಮಟ್ಟ ಕಂಡು ಬಂದರೆ, ಶಿಸ್ತು ಕ್ರಮ ಕೈಗೊಳ್ಳುವ ಮೂಲಕ ಬಿನ್ ತಡೆಹಿಡಿಯಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪರಿಶೀಲಿಸಿ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಎಲ್ಲೇಮಾಳ ಗ್ರಾಮ ಪಂಚಾಯಿತಿ ಸದಸ್ಯ ಚಿನ್ನವೆಂಕಟ್,ಮುಖಂಡರುಗಳಾದ ತಂಗವೇಲು, ಚಣ್ಣಲಿಂಗನಹಳ್ಳಿ ವೆಂಕಟೇಶ್ ಹಾಗೂ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ