ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಾಲ್ಯ ವಿವಾಹ ಪ್ರಕರಣಗಳು ಜರುಗದಂತೆ ಕ್ರಮ ವಹಿಸಿ:ರಾಠೋಡ

ಕಲಬುರಗಿ ಜಿಲ್ಲೆಯ ಚಿತ್ತಾಪುರ‌ ತಾಲೂಕಿನಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಜರುಗದಂತೆ ಸೂಕ್ತ ಕ್ರಮ ವಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರಾಜಕುಮಾರ ರಾಠೋಡ ಅವರು ಹೇಳಿದರು.
ಪಟ್ಟಣದ ಸಿ.ಡಿ.ಪಿ.ಒ ಕಚೇರಿಯಲ್ಲಿ ಮೇಲ್ವಿಚಾರಕರ ಸಭೆ ನಡೆಸಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅವರು ಮಕ್ಕಳ ಹಾಗೂ ಮಹಿಳೆಯರ ಬಗ್ಗೆ ಹೆಚ್ವಿನ ಕಾಳಜಿ ವಹಿಸುತ್ತಾರೆ. ಹೀಗಾಗಿ ತಾಲೂಕಿನಲ್ಲಿ ಯಾವುದೇ ರೀತಿಯ ಬಾಲ್ಯ ವಿವಾಹಗಳು ನಡೆಯದಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಮೇಲ್ವಿಚಾರಕರಿಗೆ ಸೂಚಿಸಿದರು.
ಕೆ.ಡಿ.ಪಿ ಗುರಿಗೆ ತಕ್ಕಂತೆ ಪೋಷಣಾ ಟ್ರ್ಯಾಕ್’ನಲ್ಲಿರುವ ಫಲಾನುಭವಿಗಳ ನೊಂದಣಿ, ಆಧಾರ ಪರಿಶೀಲನೆ ಮಾಡಬೇಕು. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ನಿಗದಿ ಪಡಿಸಿದ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.
ನಂತರ ಪಟ್ಟಣದ ವಚವಚ ಗಲ್ಲಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರೀಶಿಲನೆ ಮಾಡಿದರು. ಬಾಹರಪೇಟ್ ಏರಿಯಾದಲ್ಲಿ 2022-23ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಮೇಗಾ ಮ್ಯಾಕ್ರೋ ಯೋಜನೆಯ ಮೊದಲನೇ ಹಂತದಲ್ಲಿ ನಿರ್ಮಾಣವಾಗುತ್ತಿರುವ ಬಾಹಾರ್’ಪೇಠದ ಎರಡನೇ ಅಂಗನವಾಡಿ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರತಿ ತುಪ್ಪದ್, ಹಿರಿಯ ಮೇಲ್ವಿಚಾರಕಿಯರು, ವಲಯ ಮೇಲ್ವಿಚಾರಕಿಯರು ಸೇರಿದಂತೆ ಇತರರು ಇದ್ದರು.

ವರದಿ ಮೊಹಮ್ಮದ್ ಅಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ