ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಾಗಲಕಾಯಿ ಗಿಡಗಳನ್ನು ಕತ್ತರಿಸಿದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರ:ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಟಾವಿಗೆ ಬಂದಿದ್ದ ಹಾಗಲಕಾಯಿ ಗಿಡಗಳನ್ನು ದುಷ್ಕರ್ಮಿಗಳು ರಾತ್ರೋರಾತ್ರಿ ಕತ್ತರಿಸಿ ನಾಶ ಪಡಿಸಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮ ಪಂಚಾಯಿತಿಯ ಚೌಡಸಂದ್ರದಲ್ಲಿ ನಡೆದಿದೆ.
ಗ್ರಾಮದ ರೈತ ಸಿ.ಎಲ್ ಲಕ್ಷ್ಮೀಪತಿ ಅವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಹಾಗಲಕಾಯಿ ಗಿಡಗಳನ್ನು ಕತ್ತರಿಸಿ ಸುಮಾರು 1 ಲಕ್ಷ ನಷ್ಟ ಉಂಟು ಮಾಡಿದ್ದಾರೆ ಎಂದು ಗ್ರಾಮಾಂತರ ಠಾಣೆ ಪೊಲೀಸರಿಗೆ ಲಕ್ಷ್ಮೀಪತಿ ದೂರು ನೀಡಿದ್ದಾರೆ.

ಲಕ್ಷ್ಮೀಪತಿ ಎಂಬ ರೈತನ ತೋಟದಲ್ಲಿ ಬಂದಿದ್ದ ಹಾಗಲಕಾಯಿ ಗಿಡಗಳನ್ನು ನಾಶ ಪಡಿಸಿದ ಘಟನೆ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಇಂತಹ ಘಟನೆಗಳು ಹೆಚ್ಚುತ್ತಿವೆ. ಇದು ಕ್ಷಮಿಸಲಾರದ ದುಷ್ಕೃತ್ಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ರೈತರು ಸಾಲ ಸೋಲ ಮಾಡಿ ಬೆಳೆ ಇಟ್ಟು ಅದರಿಂದ ಬರುವ ಅಲ್ಪ ಸ್ವಲ್ಪ ಹಣಕಾಸಿನ ಮೇಲೆ ಬದುಕನ್ನು ರೂಪಿಸಿಕೊಳ್ಳುವ ಕನಸನ್ನು ಕಾಣುತ್ತಾರೆ. ಆದರೆ ಕಟಾವಿಗೆ ಬರುವ ಹಂತದಲ್ಲಿ ಈ ರೀತಿ ಆದರೆ ನೇಣುಹಾಕಿಕೊಳ್ಳುವಂತ ಸ್ಥಿತಿಗೆ ರೈತ ತಲುಪುತ್ತಾನೆ. ಇಂತಹ ಪರಿಸ್ಥಿತಿ ಯಾವ ರೈತರಿಗೂ ಬರಬಾರದು. ಈ ದುಷ್ಕೃತ್ಯಕ್ಕೆ ಕಾರಣರಾದ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಕೆಗೆ ಒಳಪಡಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಎರಡು ಎಕರೆ ಭೂಮಿಯಲ್ಲಿ, ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಬಂಡವಾಳ ಹೂಡಿ ಹಾಗಲಕಾಯಿ ಬೆಳೆಯನ್ನು ಬೆಳೆದಿರುವ ರೈತ ಲಕ್ಷ್ಮೀಪತಿ ಮೊದಲ ಫಸಲಿನ ನಿರೀಕ್ಷೆಯಲ್ಲಿದ್ದ ರೈತ ಇದೀಗ ಬೆಳೆ ಕಳೆದುಕೊಂಡಿರುವ ಇವರು ದುಃಖದಲ್ಲಿದ್ದಾರೆ.

ವರದಿ ಗಗನ್ ಸಾಮ್ರಾಟ್ ,ಶಿಡ್ಲಘಟ್ಟ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ