ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀನಿವಾಸ್ ರವರ ಸೇವೆ ಗುರುತಿಸಿ ತಾಲ್ಲೂಕು ಆಡಳಿತದ ವತಿಯಿಂದ ಸನ್ಮಾನ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಲಕ್ಕೂರು ವಿಭಾಗದ ಬೆಸ್ಕಾಂ ಇಲಾಖೆಯ ಕಿರಿಯ ಅಭಿಯಂತರಾದ ಶ್ರೀನಿವಾಸ್ ಇವರ ಸೇವೆಯನ್ನು ಗುರುತಿಸಿ ತಾಲ್ಲೂಕು ಆಡಳಿತ ವತಿಯಿಂದ ಇಂದು ಪಟ್ಟಣದ ಹೊಂಡ ಕ್ರೀಡಾಂಗಣದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ವೈ ನಂಜೇಗೌಡ ರವರು ಸನ್ಮಾನ ಮಾಡಿದರು.
ಬೆಸ್ಕಾಂ ಇಲಾಖೆಯ ಲಕ್ಕೂರು ವಿಭಾಗದ ಕಿರಿಯ ಅಭಿಯಂತರರಾದ ಶ್ರೀನಿವಾಸ್ ಹಾಗೂ ಕುಡಿಯನೂರು ವಿಭಾಗದ ಲೈನ್ ಮನ್ ವಸಂತ್ ಅವರನ್ನು ತಾಲ್ಲೂಕು ಆಡಳಿತ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಬೆಸ್ಕಾಂ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅನ್ಸಾರ್ ಪಾಷಾ ರವರು ಮಾತನಾಡಿ, ನಮ್ಮ ತಾಲ್ಲೂಕು ವ್ಯಾಪ್ತಿಯ ಲಕ್ಕೂರು ವಿಭಾಗದ ಕಿರಿಯ ಅಭಿಯಂತರರಾದ ಶ್ರೀನಿವಾಸ್ ಹಾಗೂ ಕುಡಿಯನೂರು ವಿಭಾಗದ ಲೈನ್ ಮನ್ ವಸಂತ್ ರವರ ಸೇವೆಯನ್ನು ಗುರುತಿಸಿ ತಾಲ್ಲೂಕು ಆಡಳಿತ ಇಂದು ಸನ್ಮಾನ ಮಾಡಿರುವುದು ಸಂತೋಷದ ಸಂಗತಿ. ಈ ರೀತಿ ಉತ್ತಮ ಕರ್ತವ್ಯ ನಿರ್ವಹಿಸುತ್ತಿರವರನ್ನು ಗುರುತಿಸುವುದರಿಂದ ಕೆಲಸ ನಿರ್ವಹಿಸಲು ಹೊಸ ಹುರುಪು ಮೂಡುತ್ತದೆ ಹಾಗೂ ಸನ್ಮಾನ ಸ್ವೀಕರಿಸಿದ ನಮ್ಮ ಇಲಾಖೆಯ ಶ್ರೀನಿವಾಸ್ ಹಾಗೂ ವಸಂತ್ ರವರಿಗೆ ಅಭಿನಂದನೆಗಳನ್ನು ಈ ಮೂಲಕ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ವೈ ನಂಜೇಗೌಡ, ತಹಶೀಲ್ದಾರ್ ರಮೇಶ್, ಪೋಲಿಸ್ ಇಲಾಖೆಯ ಆರಕ್ಷಕ ನಿರೀಕ್ಷಕರಾದ ವಸಂತ್ ಕುಮಾರ್ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ-ಆಕರ್ಷ.ಜಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ