ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹಾವಿದ್ಯಾಲಯಗಳು ಇರುವುದು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹೊರತೆಗೆಯುವುದಕ್ಕೆ : ಸಹಾಯಕ ಪ್ರಾದ್ಯಾಪಕ ವಿಠೋಬ

ಕೊಪ್ಪಳ:ಮಹಾವಿದ್ಯಾಲಯಗಳು ಇರುವುದೇ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತೆಗೆಯುವುದಕ್ಕೆ ಎಂದು ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ವಿಜ್ಞಾನ ವಿಭಾಗದ ಸಂಚಾಲಕರಾದ ವಿಠೋಬ ಅವರು ಹೇಳಿದರು.ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬುಧುವಾರದಂದು ವಿಜ್ಞಾನ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಸೈನ್ಸ್ ಫೆಸ್ಟ್ -2024 ನ್ನು ಉದ್ಘಾಟನೆ ಮಾಡಿ ಮಾತನಾಡಿದರು.
ನೀವು ಇಂದು ವಿಜ್ಞಾನ ಕಲಿಯುವಾಗ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದೀರಿ.
ವಿಜ್ಞಾನ ವಿಭಾಗಗಳಿಗೆ ಇಂದು ಸರಕಾರವು ಬಹಳ ಅನುದಾನ ಕೊಡುತ್ತದೆ. ಹೊಸ ಕಟ್ಟಡಗಳು, ಹೊಸ ಪ್ರಯೋಗಲಯಗಳು ಸ್ಥಾಪನೆ ಆಗುತ್ತಿವೆ ಎಂದರು.
ಮುಖ್ಯ ಅತಿಥಿಯಾಗಿರುವ ಕನ್ನಡ ವಿಭಾಗದ ಮುಖ್ಯಸ್ಥ ರಾದ ಡಾ. ಹುಲಿಗೆಮ್ಮ ಅವರು ಮಾತನಾಡುತ್ತ ನೀವು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ನಮ್ಮನ್ನೇ ನಾವು ನಿರ್ಲಕ್ಷ ಮಾಡಿಕೊಳ್ಳಬಾರದು ಎಲ್ಲರೂ ಅವಕಾಶಗಳನ್ನು ಕಳೆದುಕೊಳ್ಳಬಾರದು ಎಂದರು.
ಅಧ್ಯಕ್ಷತೆಯನ್ನು ವಹಿಸಿರುವ ಕಾಲೇಜಿನ ಪ್ರಚಾರ್ಯರಾದ ಡಾ.ಗಣಪತಿ ಲಮಾಣಿಯವರು ಮಾತನಾಡುತ್ತ ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತವೆ. ಉನ್ನತ ಶಿಕ್ಷಣ ಪಡೆಯಬೇಕು. ಕಠಿಣ ಪರಿಶ್ರಮ ಪಡೆಯಬೇಕು. ಆಗ ಮಾತ್ರ ಜೀವನದಲ್ಲಿ ಉನ್ನತ ಸ್ಥಾನ ಪಡೆಯಬಹುದು ಎಂದರು.

ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರಾದ ಡಾ. ಪ್ರದೀಪ್ ಕುಮಾರ್, ಡಾ. ನರಸಿಂಹ, ಮಂಜುಳಾ, ಆಶಾ, ಪಲ್ಲವಿ, ಯಶೋದಾ, ಬಸವರಾಜ, ಸುಷ್ಮಾ, ವಿದ್ಯಾವತಿ, ಇದ್ದರು.

ಆರ್ಶಿಯ ಮತ್ತು ತಾಸ್ಮಿಯಾ, ನಿರೂಪಿಸಿದರು. ದ್ಯಾವಮ್ಮ ಸ್ವಾಗತಿಸಿದರು. ಜ್ಯೋತಿ ಮತ್ತು ಅಸ್ಮಿಯ ಪ್ರಾರ್ಥನೆ ಗೀತೆ ಹಾಡಿದರು.ಪ್ರಿಯ ವಂದಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ