ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಸಕ ಶ್ರೀ ಹೆಚ್.ವಿ.ವೆಂಕಟೇಶ್ ರಿಂದ ಪ್ರವಾಹ ಪರಿಹಾರ ಕಾರ್ಯಗಳ ಸಿದ್ಧತೆ ವೀಕ್ಷಣೆ

ಪಾವಗಡ:ಶಾಸಕರಾದ ಶ್ರೀ ಹೆಚ್.ವಿ.ವೆಂಕಟೇಶ್ ಶ್ರೀರಾಮಕೃಷ್ಣ ಸೇವಾಶ್ರಮದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯುತ್ತಿರುವ ಉತ್ತರ ಕರ್ನಾಟಕ ಹಾಗೂ ಕೇರಳದ ವಯನಾಡು ಪ್ರವಾಹ ಪರಿಹಾರ ಕಾರ್ಯಗಳ ಸಿದ್ಧತೆಯನ್ನು ವೀಕ್ಷಿಸಿದರು. ನಿಜಕ್ಕೂ ಸಂಪೂರ್ಣ ಆಶ್ಚರ್ಯಚಕಿತರಾದ ಶಾಸಕರು ಪೂಜ್ಯ ಸ್ವಾಮಿ ಜಪಾನಂದಜೀ ಮಹಾರಾಜ್ ರವರ ದೇಶವ್ಯಾಪಿ ಕಾರ್ಯಯೋಜನೆಗಳನ್ನು ತಿಳಿದು ದಿಗ್ಭ್ರಮೆಗೊಂಡರು. ಕೇರಳ, ಉತ್ತರ ಕರ್ನಾಟಕ ಮುಂತಾದ ಪ್ರದೇಶಗಳಲ್ಲಿನ ಪ್ರವಾಹ ಪೀಡಿತರಿಗೆ ಎರಡನೇ ಹಂತದ ಕಾರ್ಯಗಳನ್ನು ನೂರಾರು ಸ್ವಯಂಸೇವಕರು ಏಕ ಪ್ರಕಾರವಾಗಿ ಕಾರ್ಯ ನಿರ್ವಹಿಸುತ್ತಿದ್ದುದನ್ನು ಕಂಡು ತೀವ್ರವಾಗಿ ಪೂಜ್ಯ ಸ್ವಾಮೀಜಿಯವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಅಭಿನಂದಿಸಿದರು. ಸ್ವಾಮೀಜಿಯವರು ನಮ್ಮ ತಾಲ್ಲೂಕಿನಲ್ಲಿ ನಡೆದಾಡುವ ದೇವರಂತೆ ಕಾರ್ಯವಹಿಸುತ್ತಾ ನಾನಾ ರೀತಿಯ ಸೇವಾ ಯೋಜನೆಗಳಲ್ಲಿ ತಮ್ಮನ್ನೇ ತಾವು ತೊಡಗಿಸಿಕೊಂಡು ಅಹರ್ನಿಷಿ ಸೇವೆಯನ್ನು ಸಲ್ಲಿಸುತ್ತಿರುವುದು ನಮ್ಮೆಲ್ಲರ ಭಾಗ್ಯವೇ ಸರಿ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ಸುರೇಶ್, ರವಿ, ರಾಜೇಶ್ , ಇಮ್ರಾನ್,ಕಿರಣ್ ಹಾಜರಿದ್ದರು.

ವರದಿ :ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ