ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೃತ ಪುರಸಭೆ ಸದಸ್ಯನ ಮನೆಗೆ ಸಚಿವ ಶಿವರಾಜ್ ತಂಗಡಗಿ ಭೇಟಿ: ಸಾಂತ್ವನ

ಕೊಪ್ಪಳ/ಕಾರಟಗಿ: ಕಳೆದ ನಾಲ್ಕು ದಿನಗಳ ಹಿಂದೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪುರಸಭೆ ಸದಸ್ಯ ರಾಮಣ್ಣನವರ ಮನೆಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಕಾರಟಗಿ ಪಟ್ಟಣದ 21ನೇ ವಾರ್ಡ್ ನ (ಅಬ್ದುಲ್ ನಜೀರ್ ಸಾಬ್ ಕಾಲೋನಿ)ಮೃತ ಪುರಸಭೆ ಕಾಂಗ್ರೆಸ್ ಸದಸ್ಯ ರಾಮಣ್ಣ ಅವರ ಮನೆಗೆ ಶುಕ್ರವಾರ ಭೇಟಿ ನೀಡಿದ ಸಚಿವರು ರಾಮಣ್ಣರ ಪತ್ನಿ ಗಾಳಿಯಮ್ಮ ಹಾಗೂ ಕುಟುಂಬಕ್ಕೆ ಸಾಂತ್ವನ ಹೇಳಿ, ನಿಮ್ಮೊಂದಿಗೆ ನಾವಿದ್ದೇವೆ ಎಂದರು.

ಈ ವೇಳೆ ರಾಮಣ್ಣ ಅವರ ಸಹೋದರ ಎಲ್ಲಪ್ಪ, ಅಂದು ಮಧ್ಯರಾತ್ರಿ ಕಳ್ಳರ ಕಳ್ಳರ ಗ್ಯಾಂಗ್ ಹಂದಿ ಕಳವು ಮಾಡಿಕೊಂಡು ಪರಾರಿಯಾಗುತ್ತಿತ್ತು. ಹಂದಿಗಳ ಚೀರಾಟದ ಶಬ್ದ ಕೇಳಿ ಹೊರಬಂದ ಸಹೋದರ ಕಳ್ಳರ ಗ್ಯಾಂಗ್ ನ್ನು ಬೆನ್ನತ್ತಿದ್ದಾರೆ.
ಈ ವೇಳೆ ಕಳ್ಳರು ರಾಮಣ್ಣನ ಮೇಲೆ ಹಲ್ಲೆ ಮಾಡಿದ ಪರಿಣಾಮ ರಾಮಣ್ಣ ಮೃತಪಟ್ಟಿದ್ದಾರೆ ಎಂದು ಸಚಿವರ ಬಳಿ ಅಳಲು ತೋಡಿಕೊಂಡರು.

ಪ್ರಕರಣದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಂದ ಮಾಹಿತಿ ಪಡೆದಿದ್ದು, ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದೇನೆ. ಮರುಣೋತರ ಪರೀಕ್ಷೆಯ ವರದಿಯಲ್ಲಿ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ