ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೊನ್ನರಹಳ್ಳಿಯಲ್ಲಿ ಸಂಭ್ರಮದ ಶನಿವಾರ

ಹುನಗುಂದ: ಶಾಲೆಯ ಹೊರಗಿನ ಅನುಭವಗಳನ್ನು ಚಟುವಟಿಕೆಗಳ ಮೂಲಕ ಒದಗಿಸಲು ಸಂಭ್ರಮ ಶನಿವಾರ ಸೂಕ್ತ ವೇದಿಕೆ ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಗಿರಿಯಪ್ಪ ಆಲೂರ ಅಭಿಪ್ರಾಯಪಟ್ಟರು.
ಅವರು ತಾಲೂಕಿನ ಅಮಿನಗಡ ಹೋಬಳಿಯ ಹೊನ್ನರಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಂಭ್ರಮ ಶನಿವಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಪ್ರತಿ ತಿಂಗಳ ಮೂರನೇ ಶನಿವಾರವನ್ನು ಬ್ಯಾಗಲೆಸ್ ಡೇ ಎಂದು ಆಚರಿಸಲು ರಾಷ್ಟ್ರೀಯ ಶಿಕ್ಷಣ ನೀತಿ-2020 ಶಿಫಾರಸ್ಸು ಮಾಡಿದೆ. ಅದರನ್ವಯ ವರ್ಷದಲ್ಲಿ ಹತ್ತು ದಿನ ವಿವಿಧ ವಿಷಯಗಳ ಮೇಲೆ ಮಕ್ಕಳಿಗಾಗಿಯೇ ಮಕ್ಕಳಿಂದ ಸನ್ನಿವೇಶ ಸೃಷ್ಟಿಸಿ ಕೌಶಲ ಮತ್ತು ಮೌಲ್ಯಗಳನ್ನು ಬೆಳೆಸುವ ಕಾರ್ಯ ಇಲ್ಲಿ ನಡೆಯುತ್ತಿದೆ ಎಂದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಸ್ ಡಿ ಎಂ ಸಿ ಅಧ್ಯಕ್ಷ ರಾಮನಗೌಡ ಪವಾಡಿಗೌಡ್ರ ಮಾತನಾಡುತ್ತಾ ಮಕ್ಕಳು ಮೊಬೈಲ್ ಗೀಳಿಗೆ ಹಾಳಾಗುತ್ತಿದ್ದು ಅದರಿಂದ ಅವರನ್ನು ಹೊರತರಲು ಈ ವಾರದ ವಿಷಯ ಪೂರಕವಾಗಿದೆ ಎಂದರು.
ಮಕ್ಕಳು ಶಿಕ್ಷಕರಾದ ಎಂ.ಬಿ. ವಂದಾಲಿ ಹಾಗೂ ಬಸಮ್ಮ ಗಟ್ಟಿಗನೂರ ಅವರ ಮಾರ್ಗದರ್ಶನದಲ್ಲಿ ನಾಲ್ಕು ತಂಡಗಳಾಗಿ ‘ನೀವೇನು ಬಲ್ಲಿರಿ?, ಚಿತ್ರ ಬಿಡಿಸೋಣ ಬನ್ನಿ, ನಟಿಸು-ಕಲಿ’ ಚಟುವಟಿಕೆಗಳನ್ನು ನಿರ್ವಹಿಸಿದರು.
ಪ್ರಭಾರಿ ಮುಖ್ಯ ಗುರು ಎಂ ಜಿ ಬಡಿಗೇರ ಉತ್ತಮ ಅಭಿನಯ ಮಾಡಿದ ಮಕ್ಕಳಿಗೆ ಬಹುಮಾನವಾಗಿ ಕಲಿಕಾ ಸಾಮಗ್ರಿ ವಿತರಿಸಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಸಂಗಮೇಶ ತೋಳಮಟ್ಟಿ, ಅಮೃತಾ ಕೊಣ್ಣೂರ, ಅರ್ಜುನ ಬಾರಕೇರ, ಭಾಗ್ಯಶ್ರೀ ಸೂಳಿಬಾವಿ, ರಾಕೇಶ ಮುಳ್ಳೂರ ಇತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ