ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಕರಾತ್ಮಕವಾಗಿ ಚಿಂತಿಸೋಣ ಜಾಗತಿಕವಾಗಿ ಬೆಳೆಯೋಣ-BVS

ತುಮಕೂರು:ಭಾರತೀಯ ವಿದ್ಯಾರ್ಥಿ ಸಂಘ-ಬಿ.ವಿ.ಎಸ್ ತುಮಕೂರು ಜಿಲ್ಲೆ ವತಿಯಿಂದ
ಪಾವಗಡ ತಾಲ್ಲೂಕು, ನಿಡಗಲ್ಲು ಹೋಬಳಿ, ಚಿಕ್ಕತಿಮ್ಮನಹಟ್ಟಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕನ್ನಡ ಕಾಪಿ ಪುಸ್ತಕ ಜೊತೆಗೆ ಕಲಿಕಾ ಸಾಮಗ್ರಿಗಳಾದ ಪೆನ್ಸಿಲ್, ಅಳಿಸುವ ರಬ್ಬರ್, ಮೆಂಡರ್, ಸ್ಕೇಲ್, ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದಂತಹ ನರಸಿಂಹಮೂರ್ತಿ ಸರ್ ಹಾಗೂ ಸಹ ಶಿಕ್ಷಕರಾದ ದೇವರಾಜ್, ನಾಗಮಣಿ, ಹಾಗೂ ತುಮಕೂರು ಬಿ.ವಿ.ಎಸ್ ಜಿಲ್ಲಾ ಸಂಯೋಜಕರಾದ ಚಿಕ್ಕತಿಮ್ಮನಹಟ್ಟಿ ಗ್ರಾಮದ ಎಚ್ ಕೆಂಚರಾಯ, ಮಾಜಿ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಪೂಲಪ್ಪ ರವರು, ನಮ್ಮ ಚಳುವಳಿಗೆ ಸದಾ ಬೆಂಬಲವಾಗಿರುವ ರಾಜಕುಮಾರ್ ರವರು, ಹಾಗೂ ಸ್ನೇಹಿತ ನಾಗೇಶ್ ರವರು,ಜೆ.ಸಿ.ಬಿ ಓಬಳೇಶ್ ರವರು ಉಪಸ್ಥಿತರಿದ್ದರು.
ವಿಶೇಷವಾಗಿ ಈ ಕಲಿಕಾ ಸಾಮಗ್ರಿಗಳನ್ನು ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಬಿ.ವಿ.ಎಸ್ ನ ರಾಘವೇಂದ್ರ ರವರು ಸಣ್ಣ ಕೊಡುಗೆಯಾಗಿ ನೀಡಿದರು, ಇವರಿಗೆ ಬಿ.ವಿ.ಎಸ್ ಹಾಗೂ ಪಾವಗಡ ತಾಲೂಕಿನ ಜನತೆಯ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ