ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನವೀನ್ ಕಿಲಾರ್ಲಹಳ್ಳಿಗೆ ಭಾರತ ಸೇವಾರತ್ನ ಪ್ರಶಸ್ತಿ

ಬೆಂಗಳೂರು:ಚೇತನ ಫೌಂಡೇಷನ್ ಕರ್ನಾಟಕ, ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವತಿಯಿಂದ ರಾಜ್ಯ ಸಂಪನ್ಮೂಲ ವ್ಯಕ್ತಿ, ಸಮಾಜ ಸೇವಕ ಪಾವಗಡ ನವೀನ್ ಕಿಲಾರ್ಲಹಳ್ಳಿ ಅವರಿಗೆ ಭಾನುವಾರ ನಗರದ ಕನ್ನಡ ಸಾಹಿತ್ಯ ಪರಿಷತ್ ಕುವೆಂಪು ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾರತ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪಾವಗಡದ ಗಡಿನಾಡಿನ ಯುವಕ ಕಳೆದ 20 ವರ್ಷಗಳಿಂದ ಸಮಾಜಕ್ಕೆ ಸೇವೆ ಸಲ್ಲಿಸುತ್ತಾ ಮನೆ ಮಾತಾಗಿರುವ ನವೀನ್ ಕಿಲಾರ್ಲಹಳ್ಳಿಗೆ ಸಂಧಿರುವ ಗೌರವ ಇದಾಗಿದೆ.
ಇತ್ತೀಚಿಗೆ ಶಿಕ್ಷಣ ಕ್ಷೇತ್ರದಲ್ಲಿನ ಶಾಲಾ ಕಾಲೇಜು ಮಕ್ಕಳಿಗೆ ನೈತಿಕ ಮೌಲ್ಯಗಳ ಅರಿವನ್ನು ರಾಜ್ಯ ವ್ಯಾಪಿ ತಮ್ಮ ಸ್ವಂತ ಖರ್ಚಿನಲ್ಲಿ ಮೂಡಿಸುತ್ತಿರುವುದು ಸಾಮಾಜಿಕವಾಗಿ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.
ಪ್ರಶಸ್ತಿಗೆ ಭಾಜನರಾದ ಪಾವಗಡ ನವೀನ್ ಕಿಲಾರ್ಲಹಳ್ಳಿಯವರಿಗೆ ನೆಟ್ಟಿಗರು,ಗಣ್ಯರು ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಖ್ಯಾತ ಸಾಹಿತಿ ನಾಗೇಂದ್ರಪ್ರಸಾದ್ ,ಸಂಗೀತ ನಿರ್ದೇಶಕ ಮಹೇಶ್ ಮಹಾದೇವ್, ಗಾಯಕಿ ಡಾ.ಪ್ರಿಯದರ್ಶನಿ,ರೈತ ಕವಿ ಶಂಕರಪ್ಪ ಬಳ್ಳೇಕಟ್ಟೆ ,ಚಂದ್ರಶೇಖರ್ ಮಾಡಲಗೆರೆ ಸೇರಿದಂತೆ ಹಲವರು ಇದ್ದರು.

ವರದಿ :ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ