ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೇಂದ್ರ ಬಿಜೆಪಿ ಸರ್ಕಾರ ಕಾಂಗ್ರೆಸ್ ಸರ್ಕಾರದ ಏಳಿಗೆ ಸಹಿಸುತ್ತಿಲ್ಲ:ಶಾಸಕ ನಾರ ಭರತ್ ರೆಡ್ಡಿ

ಬಳ್ಳಾರಿ ನಗರ ಶಾಸಕರಾದ ನಾರ ಭರತ್ ರೆಡ್ಡಿ ಬಳ್ಳಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು,ಸಂಸದರು,ಪಾಲಿಕೆಯ ಸದಸ್ಯರು,ಕಾರ್ಯಕರ್ತರು ನಗರದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು.ನಗರದ ರಾಯಲ್ ವೃತ್ತದಲ್ಲಿ ಸೇರಿದ ಕಾಂಗ್ರೆಸ್ಸಿನ ನೂರಾರು ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ರಸ್ತೆಯಲ್ಲಿ ವಾಹನ ಸಂಹಾರ ತಡೆದರು ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರ ವಿರುದ್ಧ ಘೋಷಣೆಗಳು ಮೊಳಗಿಸಿದರು ಟೈರ್ ಹಾಗೂ ರಾಜ್ಯಪಾಲರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ ಪಡಿಸಿದರು. ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ತಂದೆ ಸ್ಥಾನದಲ್ಲಿದ್ದು ರಾಜಧರ್ಮ ಪಾಲಿಸಬೇಕಾದ ರಾಜ್ಯಪಾಲರು ಪಕ್ಷಪಾತಿಯಾಗಿದ್ದಾರೆ ಎಂದು ಬಳ್ಳಾರಿ ನಗರ ಶಾಸಕರಾದ ನಾರ ಭರತ್ ರೆಡ್ಡಿ ಅವರ ಹೇಳಿದರು ಮುಖ್ಯಮಂತ್ರಿಯವರ ಮೇಲೆ ಮಾತ್ರವಲ್ಲ ನಮ್ಮ ಮೇಲೂ ಕೇಸ್ ಹಾಕಿ ನಾವ್ಯಾರೂ ಅಂಜಲ್ಲ ಎಂದರು ನಾವು ಶಾಸಕರು ಸಂಸದರು ಕಾರ್ಯಕರ್ತರು ಸೈನಿಕರಂತೆ ಮುಖ್ಯಮಂತ್ರಿಯವರ ರಕ್ಷಣೆ ಮಾಡುತ್ತೇವೆ ಎಂದು ಹೇಳಿದ ಅವರು ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿದರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇದ್ದರೂ ಇರದಿದ್ದರೂ ಅವರು ಸಿಂಹ ಇದ್ದಂತೆ ನಮ್ಮ ಸಿದ್ದರಾಮಯ್ಯ ಅವರು ಜನಪರ ನಾಯಕ ಅವರನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದರು ಹಿಂದಿನ ಸರಕಾರದ ಅವಧಿಯಲ್ಲಿ ಇದೇ ರಾಜ್ಯಪಾಲರಿದ್ದರು ಆಗ ಮುರುಗೇಶ ನಿರಾಣಿ ಶಶಿಕಲಾ ಜೊಲ್ಲೆ ಹಾಗೂ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಆರೋಪಗಳ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಶನ್ ಗೆ ಅನುಮತಿ ಕೋರಲಾಗಿತ್ತು ಆಗ ಅನುಮತಿ ನಿರಾಕರಿಸಿದ್ದ ರಾಜ್ಯಪಾಲರು ಈಗ ಕೇಂದ್ರದ ದಾಳವಾಗಿ ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಅನುಮತಿ ನೀಡಿದ್ದಾರೆ ಇದು ಖಂಡನೀಯ ಇದನ್ನು ನಾವು ಖಂಡಿಸುತ್ತೇವೆ ಈ ಸಂಭಂದ ಕಾನೂನು ಹೋರಾಟದ ಜೊತೆಗೆ ಬೀದಿ ಹೋರಾಟವನ್ನೂ ನಡೆಸುತ್ತೇವೆ ಎಂದು ಅವರು ಗುಡುಗಿದರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾಂಗ್ರೆಸ್ ಸರ್ಕಾರದ ಏಳಿಗೆ ಸಹಿಸುತ್ತಿಲ್ಲ ಬಿಜೆಪಿಯೇತರ ಆಡಳಿತ ಇರುವ ರಾಜ್ಯಗಳಲ್ಲಿ ಅಧಿಕಾರ ಕಸಿಯಲು ಯತ್ನಿಸುತ್ತಿದೆ ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡು ಕರ್ನಾಟಕ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಶಾಸಕ ಭರತ್ ರೆಡ್ಡಿ ಆರೋಪಿಸಿದರು ಗಾಂಧಿ ಭವನದಿಂದ ಜಿಲ್ಲಾಧಿಕಾರಿಯವರ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಯವರ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು ಈ ಸಂದರ್ಭದಲ್ಲಿ ರಾಜ್ಯ ಸಭಾ ಸದಸ್ಯರಾದ ಡಾ ಸಯ್ಯದ್ ನಾಸೀರ್ ಹುಸೇನ್ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಡಾ ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಕೇಂದ್ರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷರಾದ ಎ ಮಾನಯ್ಯ ಬಳ್ಳಾರಿ ಜಿಲ್ಲಾ ವಕ್ಫ್ ಮಂಡಳಿಯ ಅಧ್ಯಕ್ಷ ಹುಮಾಯೂನ್ ಖಾನ್ ಡಿಸಿಸಿ ಸಮಿತಿಯ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಕೆಪಿಸಿಸಿ ಸದಸ್ಯರಾದ ಕಲ್ಲು ಕಂಬ ಪಂಪಾಪತಿ ಬ್ಲಾಕ್ ಅಧ್ಯಕ್ಷರುಗಳಾದ ಅಲ್ಲಬಾಕಷ್ ಅಭಿಲಾಶ್ ಹುಸೇನ್ ಪೀರಾ ಸುಬ್ಬರಾಯುಡು ಮೇಯರ್ ಮುಲ್ಲಂಗಿ ನಂದೀಶ್ ಮಾಜಿ ಮೇಯರ್ ಬಿ ಶ್ವೇತಾ ರಾಜೇಶ್ವರಿ ಸಬ್ಬರಾಯುಡು ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಸಮೀರ್ ಮಹಾನಗರ ಪಾಲಿಕೆ ಸದಸ್ಯರುಗಳು ಬಿ ಎಂ ಪಾಟೀಲ್ ಸೇರಿದಂತೆ ಕಾಂಗ್ರೆಸ್ಸಿನ ನೂರಾರು ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ