ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪುರಾತನವಾದ ಮೌನೇಶ್ವರ ದೇವಸ್ಥಾನ ಸಂರಕ್ಷಣೆಗೆ ಮುಂದಾದ ಅಭಿನಂದನ ಸಂಸ್ಥೆ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕಸದೊಡ್ಡಿ ಗ್ರಾಮದ ಹೊರವಲಯದಲ್ಲಿರುವ ಜಗದ್ಗುರು ಶ್ರೀ ಮೌನೇಶ್ವರ ದೇವಸ್ಥಾನದ ಆವರಣವನ್ನು ಅಭಿನಂದನ ಸಂಸ್ಥೆಯ ಸಂಡೇ ಫಾರ್ ಸೋಶಿಯಲ್ ವರ್ಕ್ ಸೇವಾ ಕಾರ್ಯದ ಅಡಿಯಲ್ಲಿ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿ ಸುಣ್ಣ ಬಣ್ಣವನ್ನು ಹಚ್ಚುವ ಮೂಲಕ ಶ್ರಾವಣ ಮಾಸಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲಗಳನ್ನು ಮಾಡಿಕೊಡಲಾಯಿತು.ಈ ದೇವಸ್ಥಾನವು ಕಲ್ಯಾಣ ಚಾಲುಕ್ಯರ ಆಳ್ವಿಕೆಯಲ್ಲಿ ನಿರ್ಮಾಣವಾಗಿದ್ದು ಕಳೆದ ಹತ್ತಾರು ವರ್ಷಗಳಿಂದ ಈ ದೇವಸ್ಥಾನವು ಸುಣ್ಣ ಬಣ್ಣವನ್ನು ಕಂಡಿರಲಿಲ್ಲ ಹಾಗೂ ಆವರಣದ ಸುತ್ತ ಮುತ್ತ ಜಾಲಿ ಗಿಡಗಳು ಹೆಮ್ಮರವಾಗಿ ಬೆಳೆದಿದ್ದವು ಆದ್ದರಿಂದ ಈ ಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.

ಈ ಸೇವಾ ಕಾರ್ಯದಲ್ಲಿ ಅಭಿನಂದನ ಸಂಸ್ಥೆಯ ಸಂಸ್ಥಾಪಕರಾದ ರಾಮಣ್ಣ ಹಂಪರಗುಂದಿ ಸದಸ್ಯರಾದ ಜಾಫರ್ಮಿಯಾ,ಮಲ್ಲಿಕಾರ್ಜುನ ಬಡಿಗೇರ,ಕಿಶೋರ,ವೆಂಕೊಬ,ಅಂಕುಸದೊಡ್ಡಿ ಗ್ರಾಮದ ಸಂತೋಷ್ ಗಚ್ಚಿನಮನಿ, ಮಲ್ಲಣ್ಣ,ಮಾನಯ್ಯ ಗ್ರಾಮ ಪಂಚಾಯಿತಿ ಸದಸ್ಯರು,
ಗುರುಭಾರ್ಗವ,ಉದಯ,
ನಿಂಗಣ್ಣ ಮೇಲ್ದಾಪುರ,
ಮರಿಬಸವ,ಬಸವರಾಜ ವಂದ್ಲಿ ಇತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ