ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾತಾ ಜನಪರ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

ಮೈಸೂರು :ಕ್ರಿಯಾಶೀಲ ಕವಯತ್ರಿ, ಶಿಕ್ಷಕಿ, ನಿರೂಪಕಿ ಶ್ರೀಮತಿ ಸುಮಾ ಪಂಚವಳ್ಳಿ ಅವರ ಸಾರಥ್ಯದಲ್ಲಿ ಮೈಸೂರಿನ ಪುರಭವನದಲ್ಲಿ ಶ್ರೀ ಮಾತಾ ಜನಪದ ಚಾರಿಟೇಬಲ್ ಟ್ರಸ್ಟ್ ಉದ್ಘಾಟನಾ ಸಮಾರಂಭದ ಅಂಗವಾಗಿ ಮೂರು ಮಂದಿ ಪೌರ ಕಾರ್ಮಿಕ ಮಹಿಳೆಯರಾದ ಶ್ರೀಮತಿ ಹನುಮಂತಮ್ಮ, ಶ್ರೀಮತಿ ಮಂಜುಳಾ, ಶ್ರೀಮತಿ ದೀಪು ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ‘ಹೂವಿನ ಜೊತೆಗೆ ನಾರು ಕೂಡಾ ಸ್ವರ್ಗಕ್ಕೆ…’ ಅನ್ನುವಂತೆ ಮುಖ್ಯ ಅತಿಥಿಯಾಗಿದ್ದ ಸಾಹಿತಿ ಶ್ರೀ ಸತೀಶ ಜವರೇಗೌಡ ಮತ್ತು ಕವಿ ಶ್ರೀ ಆದಿಲ್ ಪಾಷ ಅವರಿಗೂ ಸನ್ಮಾನದ ಅದೃಷ್ಟ ಲಭಿಸಿತು. ಜೊತೆಗೆ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಚಟುವಟಿಕೆಗಳು ಕೂಡ ಜರುಗಿ ಸಮಾರಂಭದ ಮೆರಗು ಹೆಚ್ಚಿಸಿದವು.

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್, ಗದಗ ಜಿಲ್ಲೆಯ ಉಪನ್ಯಾಸಕರಾದ ವೀರನಗೌಡ ಮರಿಗೌಡರ, ಸಾಹಿತಿ ಎಂ.ವಿ. ರಮೇಶ್‌, ಪತ್ರಕರ್ತೆ ಮ.ನ. ಲತಾ ಮೋಹನ್, ಗಾಯಕ ಆದಿಲ್ ಪಾಷ, ನಿವೃತ್ತ ಮುಖ್ಯ ಶಿಕ್ಷಕಿ ಲಕ್ಷ್ಮಮ್ಮ, ಟ್ರಸ್ಟ್ ಅಧ್ಯಕ್ಷೆ ಸವಿತಾ ಶಾಸ್ತ್ರಿ, ಸಂಸ್ಥಾಪಕ ಕಾರ್ಯದರ್ಶಿ ಜೆ.ಜಿ. ಹರ್ಷವರ್ಧನ್ ಮತ್ತಿತರರು ಉಪಸ್ಥಿತರಿದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ