ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದ ಕಲೆ ಸಹಕಾರಿ :ವಿಷಯ ಪರಿವೀಕ್ಷಕ ಚಿತ್ತಪ್ಪ

ಮರಿದಾಸನಹಳ್ಳಿಯಲ್ಲಿ ಕನ್ನಡ ಭೋದಕರ ಕಾರ್ಯಾಗಾರ ಉದ್ಘಾಟನೆ

ಪಾವಗಡ:ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದೀಯ ಕಲೆ ಸಹಕಾರಿಯಾಗಲಿದೆ ಎಂದು ಮಧುಗಿರಿ ಶೈ.ವಿಷಯ ಪರಿವೀಕ್ಷಕ ಚಿತ್ತಪ್ಪ ಅವರು ಅಭಿಪ್ರಾಯಪಟ್ಟರು.
ಗುರುವಾರ ತಾಲ್ಲೂಕಿನ ಮರಿದಾಸನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ, ಉಪನಿರ್ದೇಶಕರ ಶಾಲಾ ಶಿಕ್ಷಣ ಇಲಾಖೆ ಮಧುಗಿರಿ,ಪಾವಗಡ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ,ಕ್ಷೇತ್ರ ಸಂಪನ್ಮೂಲಾಧಿಕಾರಿ ಕಾರ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ತಾಲ್ಲೂಕು ಕನ್ನಡ ಭೋದಕರ ವೇದಿಕೆಯ 2 ನೇ ಪುನಃಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರೆಯಲು ಶಿಕ್ಷಕರ ಸೃಜನಾತ್ಮಕ ಚಟುವಟಿಕೆಗಳು ಅತ್ಯಗತ್ಯ ಮತ್ತು ಜಾನಪದದ ವಿಷಯಗಳ ಸೈದ್ಧಾಂತಿಕ ಪಠ್ಯ ಅಧ್ಯಯನಕ್ಕೆ ಜಾನಪದೀಯ ಕಲಾ ಪ್ರಕಾರಗಳಾದ ಹಾಡು, ನೃತ್ಯ, ವಿವಿಧ ಜಾನಪದ ಕಲೆಗಳ ಕೌಶಲ್ಯದಿಂದಲೇ ಅವುಗಳನ್ನು ಸಮರ್ಥವಾಗಿ ಬಳಸಿಕೊಂಡು ಭವಿಷ್ಯ ಕಟ್ಟಲು ಸಹಕಾರಿಯಾಗಲಿದೆ.ಜೊತೆಗೆ ನೆನಪಿನ ಶಕ್ತಿ ವೃದ್ಧಿಸಿ ಹತ್ತನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆಯಲು ಮಕ್ಕಳಿಗೆ ಪೂರಕವಾಗುತ್ತದೆ ಎಂದರು.
ಕ್ರಮಬದ್ಧತೆಯ ಅಧ್ಯಯನದ ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡು ಮಕ್ಕಳಲ್ಲಿ ಇನ್ನಷ್ಟು ಕಲಿಕಾಸಕ್ತಿ ಹೆಚ್ಚಿಸುವ ಶ್ರವಮವನ್ನು ಕನ್ನಡ ಭಾಷಾ ಶಿಕ್ಷಕರು ಪಾರದರ್ಶಕವಾಗಿ ಮಾಡಬೇಕು ಎಂದು ಕಿವಿ ಮಾತು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ರಾಜಗೋಪಾಲ,ಕನ್ನಡ ಭಾಷಾ ವೇದಿಕೆಯ ಉಪಾಧ್ಯಕ್ಷರಾದ ಆರ್.ನರಸಿಂಹಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ರಂಗಪ್ಪ,ಶಿಕ್ಷಕರಾದ ಕಾಂತರಾಜು,ಅರುಣ.ಪಿ.ಎಸ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕರು ನಾಗರಾಜು ಹಾಗೂ ನರಸೇಗೌಡ ಗಮಕ ವಾಚಕವನ್ನು ನೆರವೇರಿಸಿದರು.

ವರದಿ. ಕೆ. ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ