ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೂಡ್ಲಿಗಿ:ಆರೋಗ್ಯ ಸಿಬ್ಬಂದಿಯಿಂದ ಆರೋಗ್ಯ ತಪಾಸಣೆ ಜಾಗ್ರತೆ ಅಭಿಯಾನ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಆರೋಗ್ಯ ಇಲಾಖಾ ಸಿಬ್ಬಂದಿಯಿಂದ ಆರೋಗ್ಯ ಜಾಗ್ರತೆ ಅಭಿಯಾನ ಜರುಗಿತು.ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿದರು ಮತ್ತು ವೈಯಕ್ತಿಕ ಸ್ವಚ್ಚತೆ ಮನೆಯ ಒಳಗೆ ಹೊರಗಡೆ ಸುತ್ತ ಮುತ್ತ ಹಾಗೂ ನೆರ ಹೊರೆಯಲ್ಲೆಡೆಯಲ್ಲಿ, ಪರಿಸರದಲ್ಲಿ ನೈರ್ಮಲ್ಯತೆ ಕಾಪಾಡಿಕೊಳ್ಳುವುದರ ಕುರಿತು ಜಾಗ್ರತೆ ಮೂಡಿಸಿದರು.ಮಾನಸಿಕ ಧೈಹಿಕ ನ್ಯೂನತೆ ಯಾವುದೇ ರೀತಿಯಲ್ಲಿ ಅನಾರೋಗ್ಯಕ್ಕೆ ತುತ್ತಾದವರಿದ್ದಲ್ಲಿ, ಡ್ಯಂಗ್ಯೂ ಮಲೇರಿಯಾ ಟೈಫಾಯ್ಡ್ ಜ್ವರಗಳಂತಹ ಅನಾರೋಗ್ಯಗಳಿಂದ ಬಳಲುತಿದ್ದಲ್ಲಿ ಅಥವಾ ಅಂತಹ ಸೂಚನೆಗಳೊಂದಿಗೆ ಭಾದೆ ಪಡುತ್ತಿದ್ದವರ ಕುರಿತು, ವಿಚಾರಿಸಿ ಅಗತ್ಯ ಮಾಹಿತಿ ಸಂಗ್ರಹಿಸಿದರು ಮತ್ತು ಆರೊಗ್ಯ ತಪಾಸಣೆ ಮಾಡಿದರು. ಪಟ್ಟಣದ ನಿಯೋಜಿತ ವಲಯದಲ್ಲಿನ ಮನೆ ಮನೆಗಳಿಗೆ ತೆರಳಿ, ಕುಟುಂಬದ ಪ್ರತಿಯೊಬ್ಬರ ಆರೋಗ್ಯ ಕುರಿತು ಯೋಗ ಕ್ಷೇಮ ವಿಚಾರಿಸಿ ಅಗತ್ಯ ಮಾಹಿತಿ ಸಂಗ್ರಹಿಸಿದರು. ಅಂತಯೇ ಪಟ್ಟಣದ ಶ್ರೀಕೊತ್ತಲಾಂಜನೇಯ ದೇವಸ್ಥಾನ ಹಾಗೂ ಗ್ರಾಮದೇವತೆ ಶ್ರೀಊರಮ್ಮ ದೇವಿ ದೇವಸ್ಥಾನದ ಸುತ್ತ ಮುತ್ತ ತಿಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ(PHCO)ಸುನಿತ ರವರು, ತಮ್ಮ ಸಹಾಯಕರೊಡಗೂಡಗೂಡಿ. ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿದರು. ಕುಟುಂಬದ ಪ್ರತಿ ಸದಸ್ಯರ ಕುರಿತು ಮಾಹಿತಿ ಸಂಗ್ರಹಿಸಿದರು, ಅರೋಗ್ಯ ಜಾಗ್ರತೆ ಕುರಿತು ಮಾಹಿತಿ ನೀಡಿ ವೈಯಕ್ತಿಕ ಸ್ವಚ್ಛತೆ ಹೊಂದುವ ಬಗ್ಗೆ ಮತ್ತು ಮನೆ ಒಳ ಹೊರಗೂ ಸ್ವಚ್ಚತೆ ನಿರ್ವಹಿಸುವಂತೆ ಸೂಚಿಸಿದರು, ಪರಿಸರದಲ್ಲಿ ನೈರ್ಮಲ್ಯತೆ ಕಾಪಾಡಿಕೊಳ್ಳುವಂತೆ ಪ್ರತಿಯೊಬ್ಬರಲ್ಲಿ ತಿಳುವಳಿಕೆ ಮೂಡಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ