ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಸಿ:ರಾಜ್ಯ ಪ್ರಶಸ್ತಿ ಪುರಸ್ಕೃತ ಅಮರೇಗೌಡ ಮಲ್ಲಾಪೂರ ಮನವಿ

ರಾಯಚೂರು:ಗಣೇಶ ಚತುರ್ಥಿ ಹಬ್ಬ ಸಮೀಪಿಸುತ್ತಿದೆ ಹಬ್ಬದಲ್ಲಿ ಪಿಓಪಿ ಗಣಪತಿ ಮೂರ್ತಿಗಳನ್ನು ಬಳಸದೆ ಮಣ್ಣಿನಿಂದ ತಯಾರಿಸಿದ ಹಾಗೂ ವೃಕ್ಷ ಗಣಪತಿಗಳನ್ನು ಬಳಸಿ ಎಲ್ಲರೂ ಪರಿಸರ ಪ್ರಜ್ಞೆ ಬೆಳಸಿಕೊಳ್ಳಬೇಕು ಎಂದು ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ (ರಿ).ರಾಜ್ಯ ಘಟಕ ರಾಯಚೂರು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಅಮರೇಗೌಡ ಮಲ್ಲಾಪೂರ ಮನವಿ ಮಾಡಿದರು.

ಸಿಂಧನೂರು ನಗರದ ವಾರ್ಡ ನಂಬರ್ 1ರ ನಟರಾಜ ಕಾಲೋನಿಯ ವನಸಿರಿ ಫೌಂಡೇಶನ್ ಕಾರ್ಯಾಲಯದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ಪಿಓಪಿ ಗಣಪತಿ ಮೂರ್ತಿಗಳನ್ನು ಬಳಸುವುದರಿಂದ ಪರಿಸರಕ್ಕೆ ತುಂಬಾ ಹಾನಿಯಾಗುತ್ತದೆ ಜೊತೆಗೆ ಇವುಗಳನ್ನು ನೀರಿನಲ್ಲಿ ವಿಸರ್ಜಿಸುವಾಗ ಅಲ್ಲಿರುವ ಜಲಚರ ಪ್ರಾಣಿಗಳ ಜೀವ ಜಂತುಗಳ ಪ್ರಾಣಕ್ಕೆ ಕುತ್ತು ಬರುತ್ತದೆ.ಮಣ್ಣಿನ ಗಣಪತಿಗಳನ್ನು ಬಳಸುವುದರಿಂದ ಅದು ನೀರಿನಲ್ಲಿ ಸಹಜವಾಗಿ ಕರಗಿ ಹೋಗುವುದರಿಂದ ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸುವುದಿಲ್ಲ.ಸರ್ಕಾರ ಕೂಡಾ ಈಗಾಗಲೇ ಪಿಓಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಿದೆ.ಸಾರ್ವಜನಿಕರು ದಯವಿಟ್ಟು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸಲು ಮುಂದಾಗಬೇಕು.ಪ್ರತಿಯೊಬ್ಬ ನಾಗರಿಕರಿಗೂ ಇದರ ಬಗ್ಗೆ ಜಾಗೃತರಾಗಿರಬೇಕು ಎಂದು ಮನವಿ ಮಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ