ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ಅಗರಖೇಡ ಜಿಲ್ಲಾ ಪಂಚಾಯತ್ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಗಳು”

“ಶ್ರೀ ಗುರುನಾಥ ಜಕ್ಕಪ್ಪ ಹಾವಳಗಿ ಹಾಗೂ ಶ್ರೀ ವಿಠ್ಠಲ ಗೌಡ ಪಾಟೀಲ್”

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಅಖಾಡಕ್ಕೆ ಇಳಿಯಲು ಸಜ್ಜಾಗಿರುವ ಘಟಾನುಘಟಿಗಳು ಹಾಗೂ ಜನಪರ ಸೇವಕರು ಶ್ರೀ ಗುರುನಾಥ ಜಕ್ಕಪ್ಪ ಹಾವಳಗಿ ಹಾಗೂ ಶ್ರೀ ವಿಠ್ಠಲಗೌಡ ಕ ಪಾಟೀಲ್ ಇವರಿಬ್ಬರೂ ಟಿಕೆಟ್ ಆಕಾಂಕ್ಷಿಗಳಾಗಿದ್ದು,ಅದೃಷ್ಟ ಯಾರ ಮುಡಿಗೆ ಏರುವುದು ಕಾದುನೋಡಬೇಕಾಗಿದೆ.
ಇವರಿಬ್ಬರ ಹಿನ್ನೆಲೆಯನ್ನು ನೋಡಬೇಕಾದರೆ ಶ್ರೀ ಗುರುನಾಥ್ ಜಕ್ಕಪ್ಪ ಹಾವಳಗಿ ಇವರು ಮೂರು ಬಾರಿ ಅಗರಖೇಡ ಗ್ರಾಮ ಪಂಚಾಯತಿಯ ಸದಸ್ಯರಾಗಿ ಹಾಗೂ ಸತತ ಐದು ಬಾರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಾಗಿ ಹಾಗೂ ಹಾಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಾಗಿದ್ದಾರೆ. ಇವರು ಜಾತಿ ಭೇದವೆನ್ನದೆ ಸಮಾಜ ಪರವಾಗಿ ಕೆಲಸವನ್ನು ನಿರ್ವಹಿಸುತ್ತಾ ಬಂದಿದ್ದಾರೆ.
ಶ್ರೀ ವಿಠ್ಠಲ್ ಗೌಡ ಕ ಪಾಟೀಲ್ ಇವರು ಅಗರಖೇಡ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಐದು ವರ್ಷ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ ಹಾಗೂ ಹಾಲಿ ಅಗರಖೇಡ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದಾರೆ. ಇವರು ಕೂಡಾ ಯಾವುದೇ ಜಾತಿ ಭೇದವನ್ನು ಮಾಡದೆ ಸಮಾಜದಲ್ಲಿ ಜನಪರವಾದ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.
ಆದರೆ ಇನ್ನೂ ಅಗರಖೇಡ ಜಿಲ್ಲಾ ಪಂಚಾಯಿತಿಗೆ ಮೀಸಲು ಪ್ರಕಟವಾಗಿಲ್ಲ,ಆದರೆ ಜನರಲ್ಲಿ ಇವರಿಬ್ಬರ ನಡುವೆ ಯಾರು ಸ್ಪರ್ಧೆ ಮಾಡುವರು ಎಂಬ ಕುತೂಹಲ ಹೆಚ್ಚಾಗಿದೆ. ಇವರಿಬ್ಬರೂ ಬಡವರ ಪರ ಹಾಗೂ ಸಾಮಾಜಿಕ ಕಳಕಳಿ ಉಳ್ಳವರು,ಆದರೆ ಅಗರಖೇಡ ಜಿಲ್ಲಾ ಪಂಚಾಯತಿ ಕ್ಷೇತ್ರದ ಟಿಕೆಟ್ ಯಾರಿಗೆ ಒಲಿಯುವುದೆಂದು ಇವರಿಬ್ಬರ ಅಭಿಮಾನಿಗಳು ಹಾಗೂ ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ವರದಿ-ಮನೋಜ್ ನಿಂಬಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ