ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಡಗರದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ದಿಗ್ಗಾಂವ್ ಗ್ರಾಮದ ಡಿ.ಎ.ವಿ ಓರಿಯಂಟ್ ಜ್ಞಾನ ಮಂದಿರ ಶಾಲೆಯಲ್ಲಿ ಸಡಗರದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು ಅರುಣವರ್ಗ (ಎಲ್.ಕೆ.ಜಿ) ಮತ್ತು ಉದಯವರ್ಗ(ಯು. ಕೆ..ಜಿ) ವಿದ್ಯಾರ್ಥಿಗಳು ಶ್ರೀ ಕೃಷ್ಣಮತ್ತು ರಾಧೆಯ ವೇಷಧಾರಿಗಳಾಗಿ ಮಿಂಚಿದರು ಶಾಲೆಯ ಪ್ರಾಚಾರ್ಯರಾದ ಶ್ರೀಮತಿ ಜಿ. ಜ್ಯೋತಿ ದ್ವೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು.

3-4 ನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆ ಹಾಡಿದರು ,5ನೇ ತರಗತಿಯ ವಿದ್ಯಾರ್ಥಿನಿ ಕು. ಶ್ರಾವಣಿ ಭಾಷಣ ಮಾಡಿದಳು 4-5ನೇ ತರಗತಿ ಯಾ ವಿದ್ಯಾರ್ಥಿ ಗಳು ನೃತ್ಯ ಪ್ರದರ್ಶಿಸೀದರು ಶಾಲೆಯ ಪ್ರಾಚಾರ್ಯರು ಶ್ರೀ ಕೃಷ್ಣ ಜಗತ್ತಿಗೆ ಹೇಳಿದ ಸಂದೇಶಗಳು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಚಾರ್ಯರಾದ ಶ್ರೀಮತಿ ಜಿ. ಜ್ಯೋತಿ, ಶಾಲೆಯ ಸಂಯೋಜಕರಾದ ಶ್ರೀಮತಿ ಪ್ರೀತಾ ಎಸ್ ಕುಮಾ‌ರ್ ಮತ್ತು
ಶ್ರೀ ಸುಭಾಷರೆಡ್ಡಿ, ಸರ್ವ ಶಿಕ್ಷಕ
ವರ್ಗ ಉಪಸ್ಥಿತರಿದ್ದರು.4-5ನೇ
ತರಗತಿಯ ಕು. ಜಶ್ವಿತಾ ಮತ್ತು
ವೈಭವಿ ಕಾರ್ಯಕ್ರಮ ನಿರೂಪಿಸಿದರು.
4ನೇ ತರಗತಿ ವಿದ್ಯಾರ್ಥಿ ಮನ್ವಿತ್ ವಂದನೆಗಳನ್ನು ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಸಂಪನ್ನವಾಯಿತು.

ವರದಿ ಮೊಹಮ್ಮದ್ ಅಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ