ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ಶಾಸಕ ಎಂ. ಆರ್.ಮಂಜುನಾಥ್ ರವರಿಂದ ಗುದ್ದಲಿ ಪೂಜೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಂಬಿಕಾಪುರ ಗ್ರಾಮದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರು ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಬಳಿಕ ಶಾಸಕ ಎಂ.ಆರ್ ಮಂಜುನಾಥ್ ಅವರು ಮಾತನಾಡಿ, ಹನೂರು ಪಟ್ಟಣದಿಂದ ಅಂಬಿಕಾಪುರ ರಾಮಾಪುರ ಮಾರ್ಗವಾಗಿ ಗರಿಕೆ ಖಂಡಿ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಎದುರಾಗಿತ್ತು, ಹೀಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿ ಸರ್ಕಾರದಿಂದ 10 ಕೋಟಿ ಅನುದಾನ ಮಂಜೂರಾಗಿದ್ದು ,ಟೆಂಡರ್ ಪ್ರಕ್ರಿಯ ಸಹ ಮುಗಿದಿದೆ ಹೀಗಾಗಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಅಭಿವೃದ್ಧಿ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಂಡು ಬೇಗ ಕಾಮಗಾರಿಯನ್ನು ಮುಗಿಸಬೇಕು ಎಂದು ಗುತ್ತಿಗೆದಾರರಿಗೆ ತಿಳಿಸಿದರು.
ನಂತರ ಮಾತನಾಡಿದ ಅವರು ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿ ಜನರಿಗೆ ಸಂಚಾರ ಮಾಡಲು ಅನುವು ಮಾಡಿ ಕೊಡಬೇಕೆಂದು ಗುತ್ತಿಗೆದಾರರಿಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಆಂಬಿಕಾಪುರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ನೀರಾವರಿ ಇಲಾಖೆ ಇಂಜಿನಿಯರ್ ರಮೇಶ್ , ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಮಹೇಶ್ ,ಚಿನ್ನನ್, ರಾಮಕೃಷ್ಣ,ಮುಖಂಡರುಗಳಾದ ಗ್ರಾಮ ಪಂಚಾಯಿತಿ ಅಧ್ಯಕ್ಷ ರುದ್ರನಾಯಕ, ಅಜ್ಜೀಪುರ ಗ್ರಾ. ಪಂ ಅಧ್ಯಕ್ಷ ರುದ್ರ ನಾಯಕ್, ಸೂಳೇರಪಾಳ್ಯ ಗ್ರಾ. ಪಂ ಅಧ್ಯಕ್ಷರು ಮುತ್ತುರಾಜು,ಚಮುಲ್ ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ಛಲವಾದಿ ತಾ. ಅಧ್ಯಕ್ಷ ಬಸವರಾಜು, ರೈತ ಸಂಘದ ತಾ. ಅಧ್ಯಕ್ಷ ಅಮ್ಜದ್ ಖಾನ್, , ಸದ್ಯಸರಾದ,ರಾಜೇಂದ್ರ , ರಾಚಪ್ಪ, ಲೋಕೇಶ್, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶಿವಮೂರ್ತಿ,ಮುಖಂಡರಾದ ಜೆಸ್ಸಿಂ,ಸಿಂಗಾನಲ್ಲೂರು ರಾಜಣ್ಣ ,ಹನೂರು ರಾಜೂಗೌಡ ,ಪಾಷಾ,ಮಂಜೇಶ್ ಗೌಡ , ಎಸ್.ಆರ್ ಮಹಾದೇವ್, ಬಸರತ್, ಜವಾದ್ ತಸ್ಲಿಮಾ ,ವೆಂಕಟೇಶ್ ,ಮುತ್ತರಾಜಮ್ಮ, ಗೋವಿಂದ್, ಶಿವರಾಮ್,ರೈತ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ