ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸುಪ್ರಸಿದ್ಧ ಶನಿಮಹಾತ್ಮ ಕಡೆ ಶ್ರಾವಣ ಶನಿವಾರ ಹರಿದು ಬಂದ ಭಕ್ತಿಸಾಗರ

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶನಿಮಹಾತ್ಮ ದೇವಸ್ಥಾನದಲ್ಲಿ ಶ್ರಾವಣ ಮಾಸದಲ್ಲಿ ಶೀತಲಾಂಬ ಮತ್ತು ಶನಿಮಹಾತ್ಮ ವಿಶೇಷವಾದಂತಹ ಹೂವಿನ ಅಲಂಕಾರವನ್ನು ಮಾಡಲಾಗಿತ್ತು.

ಕೊನೆ ಶ್ರಾವಣ ಶನಿವಾರವಾಗಿರುವುದರಿಂದ ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಿಂದ ಮೂಲೆ ಮೂಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರ ದರ್ಶನವನ್ನು ಪಡೆದುಕೊಂಡಿದ್ದಾರೆ.

ಸ್ವತಹ ಭಕ್ತಾದಿಗಳು ಮಾತಾಡಿ ನಾವು ಸುಮಾರು 25 ವರ್ಷಗಳಿಂದ ಈ ಶನಿ ದೇವರಿಗೆ ಪ್ರತಿ ವರ್ಷ ಬರ್ತಾ ಇದೀವಿ ನಮ್ಮ ಎಲ್ಲಾ ಮನೆಯ ಸಮಸ್ಯೆಗಳು ಸಂಪೂರ್ಣವಾಗಿ ಮುಕ್ತವಾಗಿವೆ ಎಂದು ಸ್ವತಃ ಭಕ್ತಾದಿಗಳು ಹೇಳಿದ್ದಾರೆ.

ನಂತರ ಶನಿಮಹಾತ್ಮ ಟ್ರಸ್ಟ್ ಕಾರ್ಯದರ್ಶಿಗಳಾದ ಶ್ರೀನಿವಾಸ್ ಮಾತಾಡಿ ಶನಿಮಹಾತ್ಮ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಉಚಿತ ಅನ್ನಸಂತರ್ಪಣೆ ಮಾಡುತ್ತಿದ್ದೇವೆ ಹಾಗೂ ಮುಂದಿನಗಳಲ್ಲಿ ನಿರಂತರ ಅನ್ನ ದಾಸೋಹ ಮಾಡುತ್ತೇವೆ. ನಾವು ಈ ಒಂದು ಟ್ರಸ್ಟ್ ನಿಂದ ಸುಮಾರು ವರ್ಷಗಳಿಂದ ಪಾವಗಡದಲ್ಲಿ ವಿದ್ಯಾ ಸಂಸ್ಥೆಯನ್ನು ಸ್ಥಾಪನೆ ಮಾಡಿ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ಕೊಡುತ್ತಿದ್ದೇವೆ. ಅದರ ಜೊತೆಗೆ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಶನಿಮಾತ್ಮ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುತ್ತೇವೆ ಅದೇ ಅಲ್ಲದೆ ದೇವರ ಕರುಣೆ ಇದ್ದಲ್ಲಿ ಪಟ್ಟಣದಲ್ಲಿ ವೃದ್ಧಾಶ್ರಮ ಮಾಡಬೇಕು ಇದೆ ಎಂದು ಹೇಳಿದರು.

ಶ್ರೀ ಜೈಷ್ಠಾದೇವಿ ಸಮೇತ ಶ್ರೀ ಶನಿದೇವರ ವಿಶೇಷ ಬೆಳ್ಳಿ ಪಲ್ಲಕ್ಕಿ ಉತ್ಸವ,ದಿವ್ಯ ಶ್ರವಣಾನಂದ ವಾದ್ಯಗೋಷ್ಠಿಗಳೊಂದಿಗೆ ವಿಜೃಂಭಣೆಯಿಂದ ನಡೆಸಲಾಗಿದೆ.

ವರದಿ ಪಾವಗಡ ಕೆ.ಮಾರುತಿ ಮುರಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ