ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಕೆ ಕಾರ್ಯಾಗಾರ

ಬೆಂಗಳೂರು :ಹೆಚ್ ಎಸ್ ಆರ್ ಸಿಟಿಜನ್ ಫೋರಂ ರವರು ಎಚ್ಎಸ್ಆರ್ ಬಡಾವಣೆಯ ಸೆಕ್ಟರ್ 7ರ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಯ ತಯಾರಿಕಾ ಕಾರ್ಯಗಾರವನ್ನು ಏರ್ಪಡಿಸಿದ್ದರು. ಈ ಕಾರ್ಯ ಗಾರದಲ್ಲಿ ತರಬೇತಿಯ ಜೊತೆಗೆ ರಾಸಾಯನಿಕ ಮುಕ್ತ ಹಾಗೂ ಪರಿಸರ ಸ್ನೇಹಿ ಹಬ್ಬಗಳ ಆಚರಣೆಯ ಕುರಿತು ಅರಿವು ಮಾಡಿಸಲಾಯಿತು. ಸುಮಾರು ೫೦ ಕ್ಕೂ ಹೆಚ್ಚು ಮಕ್ಕಳು ಈ ಕಾರ್ಯಗಾರದಲ್ಲಿ ಭಾಗವಹಿಸಿ ಇದರ ಲಾಭವನ್ನು ಪಡೆದುಕೊಂಡರು.
ಹೆಚ್ ಎಸ್ ಆರ್ ಸಿಟಿಜನ್ ಫೋರಂ ರವರು ಕಳೆದ ಎಂಟು ವರ್ಷಗಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ
ತಯಾರಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದು, ಈ ವರ್ಷ ಜೆಪಿ ನಗರದ ನೋಬಲ್ ಕಾಲೇಜ್ ,ಸಲ ಪುರಿಯ ಸೇರನಿಟಿ ಅಪಾರ್ಟ್ಮೆಂಟ್, ಹೇಮಾವತಿ ಉದ್ಯಾನವನ ಇತ್ಯಾದಿ ಸ್ಥಳಗಳಲ್ಲಿ ಈಗಾಗಲೇ ಇದೇ ರೀತಿಯ ಕಾರ್ಯಗಾರವನ್ನು ಏರ್ಪಡಿಸಿದ್ದಾರೆ. ಇದುವರೆಗೆ 130ಕ್ಕೂ ಹೆಚ್ಚು ಮಕ್ಕಳು ಇದರ ಲಾಭ ಪಡೆದಿದ್ದಾರೆ. ಮುಂದಿನ ವರ್ಷಗಳಲ್ಲಿ ಇನ್ನಷ್ಟು ಕಾರ್ಯಾಗಾರಗಳನ್ನು ಆಯೋಜಿಸುವ ಯೋಜನೆ ಹೆಚ್ ಎಸ್ ಆರ್ ಸಿಟಿಜನ್ ಫೋರಂ ಗೆ ಇದೆ. ಹೆಚ್ ಎಸ್ ಆರ್ ಸಿಟಿಜನ್ ಫೋರಂರವರು ಘನ ತ್ಯಾಜ್ಯ ನಿರ್ವಹಣೆ ಮತ್ತು ರಾಸಾಯನಿಕ ಮುಕ್ತ ಹಾಗೂ ಪರಿಸರ ಸ್ನೇಹಿ ಹಬ್ಬಗಳ ಆಚರಣೆಯ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ನೂರಾರು ಶಿಬಿರಗಳನ್ನು ಏರ್ಪಡಿಸಿದೆ.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ