ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯುವತಿ ಕೊಲೆ ಪ್ರಕರಣ ಖಂಡಿಸಿ ಟೋಕ್ರಿ ಕೋಳಿ ಸಮಾಜ ವತಿಯಿಂದ ಬೃಹತ್ ಪ್ರತಿಭಟನೆ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಂಡೂರ್ ಗ್ರಾಮದ ನಿವಾಸಿಯಾದ ಕುಮಾರಿ ಭಾಗ್ಯಶ್ರೀ ತಂದೆ ಪಂಡಿತ್ ಅಲಗುಡೇ ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣ ಖಂಡಿಸಿ ನಗರದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಬಸವಕಲ್ಯಾಣ ತಾಲೂಕು ಟೊಕ್ರಿ ಕೋಳಿ ಸಮಾಜ ವತಿಯಿಂದ ಬೃಹತ್ ಪ್ರತಿಭಟನೆ ಜರುಗಿತು.
ನಗರದ ಗಾಂಧಿ ವೃತ್ತದಿಂದ ಮುಖ್ಯ ರಸ್ತೆ ಮಾರ್ಗವಾಗಿ ಅಂಬೇಡ್ಕರ್ ವೃತ್ತದಿಂದ ತ್ರಿಪುರಾಂತ್ ನ ಮಹರ್ಷಿ ವಾಲ್ಮೀಕಿ ವೃತ್ತದವರೆಗೆ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಪರ ಸಂಘಟನೆಗಳು ಮಾತನಾಡಿ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಿ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಟೋಕ್ರಿ ಕೋಳಿ ಸಮಾಜ ತಾಲೂಕ ಅಧ್ಯಕ್ಷರಾದ ಗೋವಿಂದ್ ಚಾಮಾಲೆ, ಪ್ರಧಾನ ಕಾರ್ಯದರ್ಶಿ ರೇಖಾ ಹೊಸಮನಿ, ಪ್ರಮುಖರಾದ ಹನಮಂತಪ್ಪ ಬೊಕ್ಕೆ, ರಾಮಣ್ಣ ಮಂಠಾಳೆ, ಸಂಜೀವಕುಮಾರ ಸುಣಗಾರ, ರಾಜಕುಮಾರ್ ಇರ್ಲೆ, ರಾಜೀವ್ ಹೊಸಮನಿ, ಬಂಡೆಪ್ಪ ಕೌಡಿಯಾಳ, ರಾಜಕುಮಾರ್ ಗುಂಡೆ, ಪ್ರಕಾಶ್ ನಾಗೂರೆ ಹಾಗು ಅನೇಕ ಹಿರಿಯರು ಪ್ರಮುಖರು ಉಪಸ್ಥಿತರಿದ್ದರು.

ವರದಿ: ಸಂದೀಪ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ