ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾರ್ವಜನಿಕ ಮಹಿಳಾ ಶೌಚಾಲಯ ನಿರ್ಮಾಣಕ್ಕಾಗಿ ಆಗ್ರಹ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸ್ವತಂತ್ರ ಯೋಧರ ನಾಡು ಕೋಗನೂರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸಾರ್ವಜನಿಕ ಮಹಿಳಾ ಶೌಚಾಲಯ ಆಗ್ರಹಿಸಿ ಮನವಿ ಪತ್ರವನ್ನು ಸಲ್ಲಿಸಲಾಯಿತು ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿಲ್ಲದ ಕಾರಣ ಪಂಚಾಯಿತಿ ಸಿಬ್ಬಂದಿ ವರ್ಗದ ಕೊಟ್ರೇಶ್ ಬೂದನೂರು ರವರಿಗೆ ಮನವಿ ಪತ್ರ ನೀಡಿ ಸ್ವಿಕೃತಿಯನ್ನು ತೆಗೆದುಕೊಳ್ಳಲಾಯಿತು.ಈ ಸಂದರ್ಭದಲ್ಲಿ ಸಾಮಾಜಿಕ/ ರೈತಪರ ಹೋರಾಟಗಾರರಾದ ರಾಕೇಶ್ ಬಿ,ರಾಜು ಎಚ್., ಅಂಕಲಿ ಹಿರಿಯ ಮುಖಂಡರಾದ ಮಲ್ಲಪ್ಪ ಎಮ್,ಸ್ಥಳೀಯರಾದ ಮಹಾಂತೇಶ್, ಪ್ರವೀಣ್ ಕೂರಗುಂದ,ಶರಣಪ್ಪ ಎನ್.ಸಿ ಇತರರು ಉಪಸ್ಥಿತರಿದ್ದರು. ವಿಷಯ ಏನೆಂದರೆ ಮನವಿ ಪತ್ರದಲ್ಲಿ ಇರುವಂತೆ ಕೋಗನೂರು ಪಂಚಾಯತಿ ವ್ಯಾಪ್ತಿಯಲ್ಲಿ ಬರುವಂತಹ ಐದು ಹಳ್ಳಿಗಳಾದ ಕೋಗನೂರು,ತಂಗೋಡ,ಗೋವಿನಕೊಪ್ಪ, ಅಂಕಲಿ,ನಾಗರಮಡವು ಈ ಹಳ್ಳಿಗಳಲ್ಲಿ ಮಹಿಳೆಯರು ಬಯಲು ಶೌಚಾಲಯವನ್ನು ಅವಲಂಬಿಸಿರುತ್ತಾರೆ ಅದರಲ್ಲಿ ಮುಖ್ಯವಾಗಿ ದಲಿತ ಕೇರಿಗಳು ಆಗಿರುತ್ತವೆ. ಇದರಿಂದ ತುಂಬಾ ತೊಂದರೆಯನ್ನು ಅನುಭವಿಸುತ್ತಿರುವ ಮಹಿಳೆಯರು ಮಳೆಗಾಲದಲ್ಲಿ ತುಂಬ ಸಂಕಷ್ಟಕ್ಕೀಡಾಗಿದ್ದಾರೆ ಹೀಗಾಗಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕೇಳುವುದೇನೆಂದರೆ ಅಚ್ಚುಕಟ್ಟಾದ ಸಾರ್ವಜನಿಕ ಮಹಿಳಾ ಶೌಚಾಲಯವನ್ನು ನಿರ್ಮಿಸಿ ಕೊಡಬೇಕೆಂದು ತಮ್ಮಲ್ಲಿ ಕಳಕಳಿಯಾಗಿ ವಿನಂತಿಸಿಕೊಳ್ಳುತ್ತೇವೆ. ಅದು ತುರ್ತಾಗಿ ಆಗಬೇಕು ಯಾವುದೇ ಹಿಂದೇಟಾಕದೆ ಇದನ್ನು ಗಂಭೀರವಾಗಿ ತೆಗೆದುಕೊಂಡು ಈ ಸಮಸ್ಯೆ ಗೆ ಸ್ಪಂದಿಸಬೇಕೆಂದು ಕೇಳಿಕೊಳ್ಳುವ ಮನವಿ ವಿಚಾರದ ವಿಷಯ ಇದಾಗಿತ್ತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ