ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂತರಾಷ್ಟ್ರೀಯ ಭರತ ನಾಟ್ಯ ಸ್ಪರ್ಧೆ

ಶಿವಮೊಗ್ಗ :ದೇಶದ ಪ್ರಖ್ಯಾತ ಭರತನಾಟ್ಯ ಕೇಂದ್ರಗಳಲ್ಲಿ ಒಂದಾದ ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದ 50ಕ್ಕೂ ಹೆಚ್ಚು ಕಲಾವಿದರ ತಂಡ ಕೇಂದ್ರದ ರೂವಾರಿಗಳಾದ
ಡಾ. ಎಸ್.ಕೇಶವಕುಮಾರ್ ಪಿಳ್ಳೈ ಅವರ ನೇತೃತವದಲ್ಲಿ ಅಂತರಾಷ್ಟ್ರೀಯ ಭರತನಾಟ್ಯ ಸ್ಪರ್ಧೆಗೆ ಭಾಗವಹಿಸಲು ಥೈಲೆಂಡ್ ಹಾಗೂ ಬ್ಯಾಂಕಾಕ್ ಪ್ರವಾಸವನ್ನು ಕೈಗೊಂಡಿದೆ.
ನಿರಂತರವಾಗಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾವಿರಾರು ಸಾಧನೆ ಮಾಡಿರುವ ನಟನಂ ಬಾಲ ನಾಟ್ಯ ಕೇಂದ್ರದ ಐವತ್ತಕ್ಕೂ ಹೆಚ್ಚು ಕಲಾವಿದರ ತಂಡ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಇದರೊಂದಿಗೆ ಕೇಂದ್ರದ ಸಂಸ್ಥಾಪಕರು, ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಕೇಶವಕುಮಾರ್ ಅವರಿಗೆ ಪಂದ್ಯಾವಳಿ ಸಮಾರಂಭದಲ್ಲಿ ವಿಶೇಷ ಗೌರವ ನೀಡಿ ಸನ್ಮಾನಿಸಲಿದ್ದಾರೆ.
ಸೆ.6 ರಿಂದ ನಡೆಯಲಿರುವ ಪಂದ್ಯಾವಳಿಯಲ್ಲಿ ನಟನಂ ಕೇಂದ್ರದ ಕಲಾವಿದರಾದ ದೃತಿ, ಅನಿಂದಿತ, ಸಾನ್ವಿ ಎಸ್., ಸಂಜನಾ, ನೈದಿಲೆ, ವೈಷ್ಣವಿ, ಪೂಜಾ, ಸೌಮ್ಯ, ಸಾನಿಕ, ಸುಷ್ಮಿತ, ಅಮೂಲ್ಯ, ಪೂರ್ವಿಕ, ಸುದೀಕ್ಷ, ಭೂಮಿಕ, ಮನಸ್ವಿ, ಸಾನ್ವಿ ಜಿ., ಸಿಂಚನ, ಖುಷಿ, ತೇಜಸ್ವಿನಿ, ಮಾನಸ, ಕಶ್ವಿ, ಶ್ರೀ ಗೌರಿ, ಅನುಷಾ, ಸಾಧ್ವಿ, ಮೇಘನಾ, ಸೌರವಿ, ಷಣ್ಮುಕಿ, ದೀಕ್ಷಾ, ಅನನ್ಯ, ಸುಜನ, ಸ್ಪೂರ್ತಿ, ರಮ್ಯಶ್ರೀ, ರೋಹಿತ, ಪ್ರೇರಣ, ದೇವಿ ಚಿನ್ಮಯಿ, ಭೂಮಿಕಾ, ಲಿಪಿಕ, ಶಾಂತಿಪ್ರಿಯ, ಮೌಲ್ಯ, ಉಪಾಸನ, ಗೆಹೇನ, ಆಕಾಂಕ್ಷ,ಶಾಲಿನಿ, ಸೀಮಾ, ಪ್ರಜ್ಞಾ ಅವರೊಂದಿಗೆ ಶಿಕ್ಷಕರ ತಂಡವಾದ ಸುಪ್ರಿಯ, ಚೈತ್ರ, ನಾಟ್ಯಶ್ರೀ, ಸೌಮ್ಯ, ವಂದನ ಕೆ. ಚೇತನ್, ಚಂದ್ರಪ್ಪ, ಶೇಖರ್ ಅವರು ಈ ಪಂದ್ಯಾವಳಿಗೆ ಭಾಗವಹಿಸಲಿದ್ದಾರೆ.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ