ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿಕ್ಷಕರ‌ ದಿನಾಚರಣೆಯಂದೆ ಅಪಘಾತಕ್ಕೆ ಬಲಿಯಾದ ವಿದ್ಯಾರ್ಥಿಗಳು

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ಘಟನೆ

ಮಾನ್ವಿಯ ಲೋಯೋಲಾ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಸಾವು
ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲು
ಅಪಘಾತಕ್ಕೆ ನಜ್ಜುಗುಜ್ಜಾದ ಲೋಯೋಲಾ ಶಾಲೆಯ ಬಸ್,ಮಕ್ಕಳ ಬೆಳವಣಿಗೆಗೆ ಶಿಕ್ಷಕರೆ ಕಾರಣ,ಆದರೆ ಶಿಕ್ಷಕರಿಗೆ ದಿನಾಚರಣೆಯ ಶುಭಾಶಯ ತಿಳಿಸಲು ಬಂದ ಲೋಯೋಲಾ ಶಾಲೆಯ ವಿದ್ಯಾರ್ಥಿಗಳು ಬಸ್ ಅಪಘಾತದಲ್ಲಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಕ್ರಾಸ್ ಬಳಿ ಸಂಭವಿಸಿದೆ.
ಲೋಯೋಲಾ ಶಾಲೆಯ ಬಸ್ ನಿತ್ಯ ಕುರ್ಡಿ ಗ್ರಾಮ ಸೇರಿ ಹತ್ತಾರು ಗ್ರಾಮದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿತ್ತು. ಆದರೆ ಶಿಕ್ಷಕರಿಗೆ ಶುಭಾಶಯ ತಿಳಿಸಲು ಖುಷಿಯಲ್ಲಿ ಬಂದ ನಾಲ್ವರು ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಮಸಣ ಸೇರಿದರೆ ಸರಕಾರಿ ಬಸ್ ನ 21 ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

ಸರಕಾರಿ ಬಸ್ ಹಾಗು ಲೋಯೋಲಾ ಶಾಲೆಯ ಬಸ್ ಅಪಘಾತಕ್ಕೆ ರಾಜ್ಯ ಹೆದ್ದಾರಿಯ ಗುಂಡಿಗಳೆ ಕಾರಣ,ಯಾಕಂದರೆ ಗುಂಡಿ ಮುಚ್ಚುವ ನೆಪದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಣ ನುಂಗಿ ಹಾಕಿದ್ದರಿಂದ ಇದಕ್ಕೆ ಕಾರಣ ಎಂದು ಸಾಮಾಜಿಕ ಕಾರ್ಯಕರ್ತರ ಆರೋಪವಾಗಿದೆ.

ವರದಿ-ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ