ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಲಾಫಿಂಗ್ ಬುದ್ಧ ಪ್ರಮೋದ್ ಶೆಟ್ಟಿ ಜೊತೆಗೆ ಸಂವಾದ

ಶಿವಮೊಗ್ಗ: ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನವನ್ನು ಕಾಣುತ್ತಿರುವ ಲಾಫಿಂಗ್ ಬುದ್ಧ ಚಿತ್ರದ ನಾಯಕ ನಟ ಪ್ರಮೋದ್ ಶೆಟ್ಟಿ ಹಾಗೂ ನಿರ್ದೇಶಕ ಭರತ್ ರಾಜ್ ರೇಡಿಯೋ ಶಿವಮೊಗ್ಗ ಸ್ಟುಡಿಯೋಗೆ ಭೇಟಿ ನೀಡಿ, ಸಂವಹನ ನಡೆಸಿದರು.
ರೇಡಿಯೋ ಶಿವಮೊಗ್ಗ ಎಫ್ ಎಂ ನ ಕಾರ್ಯ ವೈಖರಿಯನ್ನು ತಿಳಿದುಕೊಂಡು, ಉತ್ತಮ ಬೆಳವಣಿಗೆಯಾಗಲಿ ಎಂದು ಹಾರೈಸಿದರು. ರೇಡಿಯೋ ಬಳಗದೊಂದಿಗೆ ಆತ್ಮೀಯವಾಗಿ ಸಂವಹನ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಂಯೋಜಕ ವೆಂಕಟೇಶ್ ಮೂರ್ತಿ, ರೇಡಿಯೋ ಸಂಯೋಜಕ ಗುರುಪ್ರಸಾದ್ ಬಾಲಕೃಷ್ಣ, ಕಾರ್ಯಕ್ರಮ ಸಂಯೋಜಕ ಅಜೇಯ ಸಿಂಹ, ತಾಂತ್ರಿಕ ಸಂಯೋಜಕ ಶ್ರೀಕಾಂತ್, ಆರ್ ಜೆ ಗಳಾದ ಶ್ವೇತಾ ಪ್ರದೀಪ್, ಮಹಾಲಕ್ಷ್ಮೀ, ರಕ್ಷಿತಾ ಹೊಳ್ಳ ಇದ್ದರು.
ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೆಟೆಡ್ ಡೆವೆಲೆಪ್ಮೆಂಟ್ ಸೊಸೈಟಿ (ಕಿಡ್ಸ್) ಹಾಗೂ ರೇಡಿಯೋ ಶಿವಮೊಗ್ಗದ ಪರವಾಗಿ ಅತಿಥಿಗಳನ್ನು ಗೌರವಿಸಲಾಯಿತು.
ನಾಯಕ ನಟ ಪ್ರಮೋದ್ ಶೆಟ್ಟಿ ಹಾಗೂ ನಿರ್ದೇಶಕ ಭರತ್ ರಾಜ್ ಅವರೊಂದಿಗೆ ವಿಶೇಷ ಮಾತುಕತೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮ ಸೆ.6ರಂದು ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದ್ದು, ನಿಮ್ಮ ಮೊಬೈಲ್ ಗಳಲ್ಲೇ ಕೇಳಬಹುದಾಗಿದೆ. ರೇಡಿಯೋ ಶಿವಮೊಗ್ಗ ಆಪ್ ನ್ನು ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಸ್ಟೋರ್ ಗಳ ಮುಖಾಂತರ ಡೌನ್ಲೋಡ್ ಮಾಡಿಕೊಂಡು, ದಿನದ 24 ಗಂಟೆಗಳ ಪ್ರಸಾರವನ್ನು ಆನಂದಿಸಬಹುದು ಎಂದು ರೇಡಿಯೋ ಶಿವಮೊಗ್ಗದ ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್ ಕೋರಿರುತ್ತಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ