ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುಷ್ಟಗಿಯ ಎಸ್. ವಿ .ಸಿ. ಕಾಲೇಜಿನಲ್ಲಿ ಸಂಭ್ರಮದಿಂದ ಶಿಕ್ಷಕರ ದಿನಾಚರಣೆ

ಕೊಪ್ಪಳ/ಕುಷ್ಟಗಿ: ಸೆಪ್ಟೆಂಬರ್ ಐದು,ಇದು ಶಿಕ್ಷಣ ತಜ್ಞ, ರಾಜಕೀಯ ಮುತ್ಸದ್ದಿ, ಸರ್ವಪಲ್ಲಿ ಡಾ.ರಾಧಾಕೃಷ್ಣನ್ ಅವರ ಜನ್ಮದಿನ, ಅವರು ತಮ್ಮ ಜನ್ಮದಿನವನ್ನು ಶಿಕ್ಷಕ ಬಂಧುಗಳಿಗೆ ಅರ್ಪಿಸಿ, ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿರಿ ಎಂದು ಹೇಳಿದ್ದರು ಅಂದಿನಿಂದ ಪ್ರತೀ ವರ್ಷ ಸೆಪ್ಟೆಂಬರ್ ಐದರಂದು
ಶಿಕ್ಷಕರ ದಿನಾಚರಣೆ ಆಚರಿಸುತ್ತಿದ್ದಾರೆ.
ಕುಷ್ಟಗಿಯ ಪ್ರತಿಷ್ಟಿತ ಎಸ್. ವಿ.ಸಿ ‌ಕಾಲೇಜಿನಲ್ಲಿ ಅಸಂಖ್ಯಾತ ವಿದ್ಯಾರ್ಥಿಗಳು ಬಹಳ ಸಂಭ್ರಮದಿಂದ ಶಿಕ್ಷಕರ ದಿನಾಚರಣೆ ಮಾಡಿದರು.
ವೇದಿಕೆ ಯ ಮೇಲೆ ಪ್ರಾಂಶುಪಾಲರಾದ ಗುರುಪ್ರಸಾದ್ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮ ಗುರುಗಳ ಮಹತ್ವ ಸಾರುವ ಹಾಡಿನೊಂದಿಗೆ ಆರಂಭವಾಯಿತು.
ಕುಮಾರಿ ರೂಪಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು.

ವೇದಿಕೆಯಲ್ಲಿ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಶ್ರೀ ಓಂ ಕುಮಾರ ಮೇಟಿ,ವಿಜಯ ಕುಮಾರ್,ಸಂಗಮೇಶ,ಹಾಗೂ ಇಂಗ್ಲೀಷ್ ವಿಭಾಗದ ಉಪನ್ಯಾಸಕ ರಾಘವೇಂದ್ರ ಅವರು ಉಪಸ್ಥಿತರಿದ್ದು, ಶಿಕ್ಷಕರ ದಿನಾಚರಣೆಯ ಕುರಿತಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ರಾಘವೇಂದ್ರ ಸರ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು, ವಿಜಯಕುಮಾರ್ ಅವರ ವಂದನಾರ್ಪಣೆ ಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ಕಾರ್ಯಕ್ರಮ ಮುಗಿದ ನಂತರ ಕಾಲೇಜಿನ ವಿದ್ಯಾರ್ಥಿಗಳಿಂದ ಮನ ರಂಜನೆಯ ಕಾರ್ಯಕ್ರಮ ಗಳು ಯಶಸ್ವಿಯಾಗಿ ಜರುಗಿದವು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ