ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಚಿವ ಸಂಪುಟದಲ್ಲಿ ಮೀಸಲಾತಿ ವರ್ಗೀಕರಣ ಘೋಷಣೆಗೆ ಒತ್ತಾಯ

ಕಲಬುರಗಿ: ಇದೇ 17ರಂದು ಜಿಲ್ಲೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ವರ್ಗೀಕರಣ ಘೋಷಣೆ ಮಾಡಬೇಕು ಎಂದು ಮಾದಿಗ ಸಮಾಜದ ಮುಖಂಡ ರವಿ ಸಿಂಗೆ ಅರಣಕಲ್ ಅವರು ಒತ್ತಾಯಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ತಮ್ಮ ಹಕ್ಕು ಪಡೆಯಲು ಒಳ ಮೀಸಲಾತಿ ವರ್ಗೀಕರಣಕ್ಕಾಗಿ ನಡೆದ ಹೋರಾಟ ಹಾಗೂ ತ್ಯಾಗ ಬಲಿದಾನಕ್ಕೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ಜಯ ಸಿಕ್ಕಂತಾಗಿದೆ. ತಲೆ ತಲೆಮಾರಿನಿಂದ ತುಳಿತಕ್ಕೊಳಗಾಗಿ ಮೀಸಲಾತಿಯ ಸರ್ಕಾರದ ಸರಿಯಾದ ಪ್ರಯೋಜನ ಪಡೆಯಲಾಗದೆ ನೋವು ಅನುಭವಿಸುತ್ತಿದ್ದ ಪರಿಶಿಷ್ಟ ಜಾತಿ/ಪಂಗಡದ ಜನಾಂಗ ಒಳ ಮೀಸಲಾತಿಗಾಗಿ ನಡೆದ ಸುದೀರ್ಘ ಹೋರಾಟದಲ್ಲಿ ಹಲವರ ತ್ಯಾಗ ಬಲಿದಾನದ ಫಲವಾಗಿ ಸುಪ್ರೀಂ ಕೋರ್ಟ್ ಸಿಜೆಐ ಚಂದ್ರಚೂಡ್ ನೇತೃತ್ವದ 7 ಸದಸ್ಯರ ಪೀಠವು ಒಳ ಮೀಸಲಾತಿ ನೀಡುವ ಪ್ರಸ್ತಾವವನ್ನು ಎತ್ತಿ ಹಿಡಿದು, ಒಳ ಮೀಸಲಾತಿ ಸಂವಿಧಾನ ಬಾಹಿರ ಕ್ರಮವಲ್ಲ, ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎನ್ನುವದು ಸಂವಿಧಾನದ ಮೂಲ ಮಂತ್ರವಾಗಿದೆ. ಕೂಡಲೇ ಕರ್ನಾಟಕ ಸರಕಾರ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಈ ಮೀಸಲಾತಿ ಕ್ರಮವನ್ನು ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ‌ನವರು ಕಲಬುರಗಿ ಜಿಲ್ಲೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಘೋಷಣೆ ಮಾಡಬೇಕು‌ ಎಂದು ಅವರು ಆಗ್ರಹಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!