ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಡಪದ ಅಪ್ಪಣ್ಣ ನವರ 890 ನೆಯ ಜಯಂತ್ಯೋತ್ಸವ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಟೌನ್ ಹಾಲ್ ನಲ್ಲಿ ಮಂಗಳವಾರ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ಜಿಲ್ಲಾ ಮಟ್ಟದ ಜಯಂತ್ಯೋತ್ಸವ ಜಿಲ್ಲಾಡಳಿತ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಸಹಯೋಗದಲ್ಲಿ ನಡೆಯಿತು. ಈ ವೇಳೆ ಶಾಸಕ ಶಿವರಾಮ್ ಹೆಬ್ಬಾರ್ ಕಾರ್ಯಕ್ರಮ ಉದ್ಘಾಟಿಸಿದರು.

ಇದೇ ವೇಳೆ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್ ಶಿವಶರಣರ ಬದುಕು ನಮಗೆ ಆದರ್ಶ ಪ್ರಾಯ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದರು.
ರಾಜ್ಯ ಘಟಕದ ಅಧ್ಯಕ್ಷ ಸಿದ್ದು ಹಡಪದ ಪ್ರಾಸ್ತಾವಿಕ ಮಾತನಾಡಿ ಹಿಂದಿನ ಸರಕಾರದಲ್ಲಿ ಉಮಾಶ್ರೀ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಆಗಿದ್ದಾಗ ಸಮಾಜದ ಮನವಿಯಂತೆ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಣೆ ಮಾಡಲು ಅವಕಾಶ ಮಾಡಿಕೊಟ್ಟರು.
ಶಿವರಾಮ್ ಹೆಬ್ಬಾರ್ ಅವರು ಹಡಪದ ಸಮಾಜಕ್ಕೆ ಹೆಬ್ಬಾರ್ ನಗರದಲ್ಲಿ 5 ಗುಂಟೆ ಸ್ಥಳಾವಕಾಶ ನೀಡಿದ್ದಾರೆ ಎಂದು ಸ್ಮರಿಸಿದರು.

ಇದೇ ವೇಳೆ ಮಾತನಾಡಿದ ಕಾರ್ಯಕ್ರಮ ದಿವ್ಯ ಸಾನಿಧ್ಯ ವಹಿಸಿದ್ದ ಪರಮಪೂಜ್ಯ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳು ಹಡಪದ ಸಮಾಜದ ಬಂಧುಗಳು ಶ್ರಮಜೀವಿಗಳು ,ಸಮಾಜ ಸಶಕ್ತವಾಗಿ ಏಳಿಗೆ ಆಗಬೇಕಾದರೆ ಕುಡಿತ ಎನ್ನುವ ಮಹಾಮಾರಿ ಇಂದ ಪಾರಾಗಬೇಕು ಆಗ ಮಾತ್ರ ಸಮಾಜ ಆರ್ಥಿಕವಾಗಿ ಸಾಮಾಜಿಕವಾಗಿ ಪ್ರಗತಿ ಹೊಂದಲು ಸಾಧ್ಯ ಎಂದರು.
ಇದೆ ವೇಳೆ ಶಿರಸಿ ಉಪ ವಿಭಾಗದ ಸಹಾಯಕ ಆಯುಕ್ತರಾದ ಕಾವ್ಯಾ ರಾಣಿ ಅವರು ,ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಲ್ ಟಿ ಪಾಟೀಲ್, ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜ್ಞಾನದೇವ ಗುಡಿಯಾಳ, ಹುನಗುಂದ ಸಹಕಾರಿ ಸಂಘದ ಅಧ್ಯಕ್ಷರಾದ ಎಚ್ಚ ಎಂ ನಾಯ್ಕ ಸೇರಿದಂತೆ ಹಡಪದ ಸಮಾಜದ ಮುಖಂಡರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ