ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿಕ್ಷಕ ಸಿ.ಆರ್.ಸುರೇಶ (ಚೌಡ್ಲಾಪುರ ಸೂರಿ)ರವರ ಶೈಕ್ಷಣಿಕ ಸಾಧನೆ ಗುರುತಿಸಿ ವಿನಾಯಕ ಸೇವಾ ಸಮಿತಿ, ಸುಂಕದಗದ್ದೆ ಗ್ರಾಮಸ್ಥರಿಂದ ಸನ್ಮಾನ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ಶಾಲೆಯ ಶಿಕ್ಷಕರಾದ ಸಿ.ಆರ್.ಸುರೇಶ (ಚೌಡ್ಲಾಪುರ ಸೂರಿ)ರವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ವಿನಾಯಕ ಸೇವಾ ಸಮಿತಿ ಹಾಗೂ ಸುಂಕದಗದ್ದೆ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಟಿವಿ9 ವರದಿಗಾರರಾದ ಅವಿನಾಶ್ ರವರು ಮಾತನಾಡಿ ಸಿ ಆರ್ ಸುರೇಶ್ ರವರು ಒಂದು ವರ್ಷದ ಅವಧಿಯಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಸುಂಕದಗದ್ದೆ ಶಾಲೆಗೆ ಎರಡು ಲಕ್ಷದ ನಲವತ್ತು ಸಾವಿರದ ವಸ್ತುಗಳನ್ನು ಹಾಗೂ ಇತರೆ ಶಾಲೆಗೆ ಮೂರು ಲಕ್ಷಕ್ಕೂ ಹೆಚ್ಚಿನ ದೇಣಿಗೆಯನ್ನು ಕೊಡಿಸಿದ್ದಾರೆ. ಇಲ್ಲಿಯವರೆಗೆ ಇವರ ಸೇವಾವಧಿಯಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚಿನ ದೇಣಿಗೆ ಕೊಡಿಸಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರವೀಂದ್ರ ಕುಕ್ಕುಡಿಗೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಶ್ವಥ್, ಬಿ ಜೆ ಪಿ ಮುಖಂಡರಾದ ಅರೇನೂರು ಸಂತೋಷ, ಪಬ್ಲಿಕ್ ಇಪ್ಯಾಕ್ಟ ಟಿವಿ ಮುಖ್ಯಸ್ಥರು, ಗ್ರಾಮ ಪಂಚಾಯತ್ ಸದಸ್ಯರಾದ ನಟರಾಜ್, ಪವಿತ್ರ, ಪ್ರಶಾಂತ್,ಕಾರ್ತಿಕ್,ವಿನಾಯಕ ಸೇವಾ ಸಮಿತಿ ಅಧ್ಯಕ್ಷರಾದ ಶಂಕರ್, ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು, ಭಕ್ತರು, ಶಾಲೆಯ ಶಿಕ್ಷಕರು ಮತ್ತು ಮಕ್ಕಳು ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ