ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಒದ್ದು ಒಳಗೆ ಹಾಕಿ ಇಲ್ಲವೇ ರಾಜೀನಾಮೆ ಕೊಟ್ಟು ಮನೆಗೆ ಹೋಗಿ :ಸಿದ್ದಲಿಂಗ ಪೂಜಾರಿ ಆಕ್ರೋಶ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಳ್ಳಿಗಳಲ್ಲಿ ಕುಡಿಯಲು ನೀರು ಸಿಗದಿದ್ದರೂ ಸಾರಾಯಿ ಮಾತ್ರ ಕಿರಾಣಿ ಅಂಗಡಿಗಳಲ್ಲಿ ಚಹಾ ಹೋಟೆಲ್ಗಳಲ್ಲಿ ರಾಜಾರೋಷವಾಗಿ ಮಾರಾಟ ಮಾಡುತ್ತಿರುವುದು ಕಂಡುಬಂದಿದ್ದು. ಈ ನಕಲಿ ಸಾರಾಯಿ ಸೇವನೆ ಮಾಡಿದ ಹಳ್ಳಿಯ ಮುಗ್ಧ ಜನರ ಲಿವರ್ ಕಿಡ್ನಿ ಫೇಲ್ ಆಗಿ ಪ್ರಾಣ ಬಿಟ್ಟು ಎಷ್ಟು ಕುಟುಂಬಗಳು ಬೀದಿ ಪಾಲಾಗುತ್ತಿವೆ ಇದನ್ನು ಕಣ್ಣಿಗೆ ಕಂಡರೂ ಜಾಣ ಕುರುಡರಂತೆ ವರ್ತಿಸುತ್ತಿರುವ ಪೊಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆಯವರು ಏನು ಮಾಡುತ್ತಿದ್ದಾರೆ? ಅನಧಿಕೃತ ಸಾರಾಯಿ ಮಾರಾಟ ತಡೆಗಟ್ಟದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬಹುದು ಎಂದು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆಯ ತಾಲೂಕ ಅಧ್ಯಕ್ಷರಾದ ಸಿದ್ದಲಿಂಗ ಪೂಜಾರಿ ಹಾಲಗಡ್ಲಾ ಅವರು ಆಕ್ರೋಶ ವ್ಯಕ್ತಪಡಿಸಿದರು ಅಲ್ಲದೆ ತಾಲೂಕ ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು ಹಾಗೂ ತಾಲೂಕಿನಲ್ಲಿ ಪರವಾನಿಗೆ ಹೊಂದಿದ ಮದ್ಯಪಾನ ಅಂಗಡಿಯ ಮಾರಾಟಗಾರರು ಪ್ರತಿ ಹಳ್ಳಿಯಲ್ಲೂ ಕಿರಾಣಿ ಅಂಗಡಿಗಳಿಗೆ ಮತ್ತು ಚಹಾ ಸೇವನೇಯ ಅಂಗಡಿಗಳಿಗೆ ಅನಧಿಕೃತವಾಗಿ ನಕಲಿ ಸಾರಾಯಿ ಮಾರಾಟ ಮಾಡುತ್ತಿದ್ದಾರೆ ಇದಕ್ಕೆ ಕಡಿವಾಣ ಹಾಕಬೇಕೆಂದು ತಾಲೂಕ ಅಧ್ಯಕ್ಷ ಸಿದ್ದಲಿಂಗ್ ಪೂಜಾರಿ ಹಾಲಗಡ್ಲಾ ಅವರು ಈ ಸಂದರ್ಭದಲ್ಲಿ ಆಗ್ರಹಿಸಿದ್ದರು ಈ ವಿಷಯದ ಕುರಿತು ಇದಕ್ಕೆ ಸಂಬಂಧಪಟ್ಟ ತಾಲೂಕಿನ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕಲ್ಬುರ್ಗಿ ಜಿಲ್ಲಾ ಅಬಕಾರಿ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಿ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆಯ ಕರೆಗಂಟೆಯೆಂದು ಎಚ್ಚರಿಕೆಯ ಸಂದೇಶವನ್ನು ಈ ಸಂದರ್ಭದಲ್ಲಿ ನೀಡಿದರು ಹಾಗೂ ಈ ಸಂದರ್ಭದಲ್ಲಿ ತಾಲೂಕ ಪದಾಧಿಕಾರಿಗಳು ಸರಡಗಿ ಮಲ್ಲಣ್ಣ ಗೌಡ ಪೊಲೀಸ್ ಪಾಟೀಲ್ ಮೌನೇಶ್ ನರಿಬೋಳ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಅವರಾದ ಹಾಗೂ ತಾಲೂಕ ಕಾರ್ಯದರ್ಶಿ ಪವಿತ್ರಾ ಪಾಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ