ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಚಿವ ಸಂಪುಟದಲ್ಲಿ ರೈತರಿಗೆ ವಿಶೇಷ ಕಲ್ಯಾಣ ನಿಧಿ ಘೋಷಿಸುವಂತೆ ಬಸವರಾಜ ಹಡಪದ ಸುಗೂರ ಎನ್ ಆಗ್ರಹ

ಕಲಬುರಗಿ:ಕಲಬುರ್ಗಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ವಿಶೇಷ ಕಲ್ಯಾಣ ನಿಧಿ ಯೋಜನೆ ಘೋಷಣೆ ಹಾಗೂ ಅತಿವೃಷ್ಟಿಯಿಂದ ರೈತರು ಬೆಳೆದ. ತೊಗರಿ, ಹತ್ತಿ, ಹೆಸರು, ಉದ್ದು ಬೆಳೆ ಹಾನಿಗೆ ಪರಿಹಾರ ಹಾಗೂ ಜಿಲ್ಲೆಯಲ್ಲಿರುವ ಮಧ್ಯಮ ಮತ್ತು ಸಣ್ಣ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ತಿರ್ಮಾನ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಲಬುರಗಿ ರೈತ ಸಂಘದ ಗೌರವಾಧ್ಯಕ್ಷ ಬಸವರಾಜ ಹಡಪದ ಸುಗೂರ ಎನ್. ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸತತ ಬೆಳೆ ಹಾನಿಯಿಂದ ರೈತರು ಆರ್ಥಿಕವಾಗಿ ತೊಂದರೆ ಅನುಭವಿಸುವಂತಾಗಿದೆ.ಅವರ ಜೀವನ ಭದ್ರತೆಗಾಗಿ ಸರ್ಕಾರ ವಿಶೇಷ ಕಲ್ಯಾಣ ನಿಧಿ ಸ್ಥಾಪಿಸಿ ಅವರಿಗೆ ಹಣ ನೀಡಬೇಕು.ತೊಗರಿ ಮಂಡಳಿಗೆ ವಾರ್ಷಿಕ 500 ಕೋಟಿ ಹಣ ಬಿಡುಗಡೆ ಮಾಡಬೇಕು.ನೇರ ಮಾರುಕಟ್ಟೆ ನಿರ್ಮಾಣ ಮಾಡಬೇಕು.ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನಿಗದಿ ಮಾಡಿ ಖರೀದಿಸಬೇಕು.ಕಲಬುರಗಿ ಜಿಲ್ಲೆಯಲ್ಲಿ ಅನೇಕ ಅಣೆಕಟ್ಟುಗಳು ಇವೆ.ಅವುಗಳಲ್ಲಿ ಅಧೀಕ ಪ್ರಮಾಣದಲ್ಲಿ ನೀರು ಸಂಗ್ರಹವಿದ್ದರೂ ಕಾಲುವೆಗಳಲ್ಲಿ ನೀರು ಹರಿದು ಬರುತ್ತಿಲ್ಲ.ಇದಕ್ಕೆ ಕಾಲುವೆ ನಿರ್ಮಾಣ ಕಾಮಗಾರಿಯಲ್ಲಿ ಅವೈಜ್ಞಾನಿಕ ಪ್ರಮುಖ ಕಾರಣವಾಗಿದೆ.ಮಧ್ಯಮ ನೀರಾವರಿ ಯೋಜನೆಯಾದ ಬೆಣ್ಣೆತೊರಾ ಅಣೆಕಟ್ಟಿನಿಂದ ರೈತರ ಕೃಷಿ ಜಮೀನುಗಳಿಗೆ ನೀರು ಸರಬರಾಜು ಆಗುತ್ತಿಲ್ಲ.ಇದರ ಕಾಲುವೆ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಅದೇ ರೀತಿ ಗಂಡೋರಿ ನಾಲಾದ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ.ಅಮರ್ಜಾ, ಭೀಮಾ, ಮುಲ್ಲಾಮಾರಿ, ಕಾಗೀಣಾನದಂಥ ನದಿಗಳ ನೀರು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ.ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಡ್ಯಾಂ ಮಾತ್ರ ಸ್ವಲ್ಪ ಪ್ರಮಾಣದಲ್ಲಿ ರೈತರಿಗೆ ಅನುಕೂಲವಾಗಿದೆ.ಆದರೆ ಉಳಿದಂತೆ ಅಣೆಕಟ್ಟುಗಳು ಕೇವಲ ಹೆಸರಿಗೆ ಮಾತ್ರ ಇರುವುದು ದುರದೃಷ್ಟಕರ ಎಂದು ಖೇದ ವ್ಯಕ್ತ ಪಡಿಸಿದ್ದಾರೆ.

ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಅಣೆಕಟ್ಟುಗಳು ರೈತರಿಗೆ ಉಪಯೋಗಕ್ಕೆ ಬಾರದಾಗಿವೆ.ತೊಗರಿ,ಬಾಳೆ, ಕಬ್ಬು,ಹತ್ತಿ ಸೇರಿದಂತೆ ಹಲವು ವಾಣಿಜ್ಯ ಬೆಳೆಗಳು ಬೆಳೆಯಲಾಗುತ್ತಿದೆ.ಆದರೆ ರೈತರ ಕೃಷಿ ಭೂಮಿಗೆ ನೀರು ಹರಿಸಲಾಗುತ್ತಿಲ್ಲ.ನೀರಾವರಿ ಆಗಬೇಕಾಗಿದ್ದ ಸಾವಿರಾರು ಹೆಕ್ಟೇರ್ ಭೂಮಿಗಳು ಇಂದಿಗೂ ಒಣ ಬೇಸಾಯ (ಕೃಷಿ) ಆಗಿವೆ.ಹೊಸ ಕಾಲುವೆಗಳ ನಿರ್ಮಾಣ ಮಾಡಲು ಸರಕಾರ ಮೀನಮೇಷ ಎಣಿಸುತ್ತಿದೆ.ಕುಡಿಯುವ ನೀರಿನ ಅನುಷ್ಠಾನಕ್ಕೆ ಕಾಗಿಣಾ ನದಿಯ 10 ಏತ ನೀರಾವರಿ ಯೋಜನೆಗಳ ಕಾಮಗಾರಿ ಕೈಗೊಳ್ಳಲು ಈ ಹಿಂದೆ ಯಡಿಯೂರಪ್ಪ ಸರ್ಕಾರ ಭರವಸೆ ನೀಡಿತ್ತು. ಇನ್ನೂ ವರೆಗೆ ಅನುಷ್ಠಾನಕ್ಕೆ ಬಂದಿಲ್ಲ.ಅದರಂತೆ ಭೀಮಾ ಏತ ನೀರಾವರಿ ಯೋಜನೆ . ಮತ್ತು ನಮ್ಮ ಚಿತ್ತಾಪುರ ತಾಲೂಕಿನ ಸನ್ನತಿ ಭೀಮಾನದಿಯ ನೀರು ಅನೇಕ ಭಾಗದ ಸುತ್ತಮುತ್ತಲಿನ ಪ್ರದೇಶಗಳ ರೈತರ ಹೂಲಕ್ಕೆ ನೀರಾವರಿ ಕಾಲುವೆ ಮಾಡಬೇಕು ಹಾಗೂ ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಬೆಣ್ಣೆತೊರೆ ಅಣೆಕಟ್ಟೆಯಿಂದ ನೀರು ಹರಿಸಲು ಕೈಗೊಂಡಿರುವ ಕಾಮಗಾರಿ ವಿಳಂಬವಾಗುತ್ತಿದೆ.ಬೇಸಿಗೆ ವೇಳೆಗೆ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡದಿದ್ದರೆ ಹಾಹಾಕಾರ ಉಂಟಾಗುತ್ತದೆ.ಇದರ ಬಗ್ಗೆ ಸರ್ಕಾರ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಜ್ಞರ ಸಮಿತಿ ರಚಿಸಿ ಜಿಲ್ಲೆಯ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಮುಂದಾಗಬೇಕು. ಕಾಲುವೆಗಳ ಆಧುನೀಕರಣ, ಹೊಸ ಕಾಲುವೆಗಳ ನಿರ್ಮಾಣ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಸಭೆಯಲ್ಲಿ ಜಿಲ್ಲೆಯ ವಿವಿಧ ತಜ್ಞರ ಜೊತೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.‌‌‌

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ