ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅರಬಗಟ್ಟೆ ವಲಯ ಮಟ್ಟದ ಕ್ರೀಡಾಕೂಟ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕ್ರೀಡಾಂಗಣದಲ್ಲಿ ಅರಬಗಟ್ಟೆ ವಲಯ ಮಟ್ಟದ ಕ್ರೀಡಾಕೂಟಕ್ಕೆ ಇಂದು ಹೊನ್ನಾಳಿಯ ಪಟ್ಟಣದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.ಈ ವಲಯ ಮಟ್ಟದ ಕ್ರೀಡಾಕೂಟವನ್ನು ದಿಡಗೂರಿನ ಗ್ರಾಮಸ್ಥರು ಮತ್ತು ಎಸ್ ಡಿ ಎಂ ಸಿ ಕಮಿಟಿ ಅಧ್ಯಕ್ಷರು ಮತ್ತು ಸದಸ್ಯರು ಶಾಲಾ ಶಿಕ್ಷಕರು ನಡೆಸಿಕೊಟ್ಟರು.
ಕ್ರೀಡಾಕೂಟ ಉದ್ಘಾಟನೆಯನ್ನು ಎ ಜಿ ಪ್ರಕಾಶ್ ಎಪಿಎಂಸಿ ಮಾಜಿ ಅದ್ಯಕ್ಷರು, ಮಲ್ಲೇಶ್ ಎಸ್ ಡಿ ಎಂ ಸಿ ಅಧ್ಯಕ್ಷರು, ನಿಂಗಪ್ಪ, ದೈಹಿಕ ಶಿಕ್ಷಕ ಮಂಜಪ್ಪ, ಇದ್ದರು.
ಇಂದಿನ ಮಕ್ಕಳು ಯುವಕರು ಕ್ರೀಡೆ ಮತ್ತು ಸಾಂಸ್ಕೃತಿಕ ಕಲಾಮೇಳ ಬಗ್ಗೆ ಗಮನ ಹರಿಸದೆ ಇರುವುದು ತುಂಬಾ ನೋವಾಗಿದೆ
ಬರೀ ಮೋಬೈಲ್ ನಲ್ಲಿ ಗೇಮ್, ರಿವ್ಯೂ, ರೀಲ್ಸ್ ಬಗ್ಗೆ ಗಮನಹರಿಸಿದ್ದಾರೆ ಎಂದು ಹೇಳಿದರು.
ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಅರಬಗಟ್ಟೆ ಸರ್ಕಾರಿ ಶಾಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪಡೆದುಕೊಂಡಿದ್ದಾರೆ.
ಕಬ್ಬಡಿ ಪಂದ್ಯಾವಳಿ ಎರಡನೇ ಸ್ಥಾನವನ್ನು ದಿಡಗೂರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪಡೆದುಕೊಂಡಿದ್ದಾರೆ
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲಾಕ್ಷಪ್ಪ ಬಿಜೆಪಿ ಮುಖಂಡರು, ಅಣ್ಣಪ್ಪ ಸ್ವಾಮಿ, ಎಂ ಬಿ ಹನುಮಂತಪ್ಪ ಉಪನ್ಯಾಸಕರು ,ಸಿದ್ದೇಶ್ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು,ಪರಮೇಶಚಾರ ಮಾಜಿ ಎಸ್ ಡಿ ಎಂ ಸಿ ಅದ್ಯಕ್ಷರು, ಹನುಮಂತಪ್ಪ, ಸುದೀಪ್, ಪಾಲಾಕ್ಷ ಇದ್ದರು.

ವರದಿ ಪ್ರಭಾಕರ್ ಡಿ ಎಂ, ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ