ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾವಸಾರ ಕ್ಷತ್ರಿಯ ಸಮಾಜ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಪೀಶೆ ಪ್ರಭುದೇವ ವಕೀಲರ ಅವಿರೋಧ ಆಯ್ಕೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಶ್ರೀ ಪಾಂಡುರಂಗ ವಿಠಲ ದೇವಸ್ಥಾನದಲ್ಲಿ
ಭಾವಸಾರ ಕ್ಷತ್ರಿಯ ಸಮಾಜ ಮಂಡಳಿಯ ಅಧ್ಯಕ್ಷರ ಸಭೆ ನಡೆಸಲಾಗಿತ್ತು.ಈ ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪಟ್ಟಣದ ವಕೀಲರಾದ ಪೀಶೆ ಪ್ರಭುದೇವ ರವರು ಅವಿರೋಧವಾಗಿ ಆಯ್ಕೆಯಾದರು ನಂತರ ನೂತನ ಅಧ್ಯಕ್ಷರಾದ ಪೀಶೆ ಪ್ರಭುದೇವ ರವರು ಸುದ್ದಿಗಾರರೊಂದಿಗೆ ಮಾತನಾಡಿ ಭಾವಸಾರ ಕ್ಷತ್ರಿಯ ಸಮಾಜದಲ್ಲಿ ಅತಿ ಹಿಂದುಳಿದ ಜನಾಂಗದವರಾದ ನಮ್ಮವರು ದರ್ಜಿ ಕೆಲಸವನ್ನು ಮಾಡಿಕೊಂಡಿರುತ್ತಾರೆ ಇವರ ಎಲ್ಲಾ ಅನಾನುಕೂಲತೆಗಳನ್ನು ಹಾಗೂ ಸಮಾಜದ ಸೇವೆಯನ್ನು ಮಾಡುವುದರ ಜೊತೆಗೆ ಅವರ ಎಲ್ಲಾ ಕಷ್ಟಗಳಲ್ಲಿ ಭಾಗಿಯಾಗಿ ಸರ್ಕಾರದಲ್ಲಿ ಅವರಿಗೆ ಸಿಗಬೇಕಾದಂತಹ ಎಲ್ಲಾ ಸವಲತ್ತುಗಳನ್ನು ಪಡೆದುಕೊಳ್ಳಲು ಶ್ರಮವಹಿಸುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಡೊಂಗ್ರೆ ವಿಜಯ್ ಕುಮಾರ್, ಗುಜ್ಜರ್ ರಾಜೇಂದ್ರಕುಮಾರ್, ಹವಳೆ ಕೊಟ್ರೇಶ್, ನಾಜರೇ ನಾಗರಾಜರಾವ್, ಪಟಕೆ ವಿಶ್ವನಾಥ ರಾವ್ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ