ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ಕಾರಿ ಶಾಲೆ ವಿದ್ಯಾರ್ಥಿನಿಯರು ಖೋ ಖೋ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕೊಟ್ಟೂರು:ದಿನಾಂಕ: 23/09/2024 ರಂದು ಕೂಡ್ಲಿಗಿ ತಾಲೂಕಿನಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಖೋ ಖೋ ಕ್ರೀಡಾಕೂಟ ನಡೆಸಲಾಗಿತ್ತು.
ಈ ಕ್ರೀಡಾಕೂಟದಲ್ಲಿ ಕೊಟ್ಟೂರು ತಾಲೂಕಿನ ಗಾಣಗಟ್ಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.ಈ ಸಂದರ್ಭದಲ್ಲಿ ಗಾಣಗಟ್ಟಿ ಗ್ರಾಮದ ಯುವ ಮುಖಂಡರಾದ ಎಚ್. ಬಿ. ಮಹಾಂತೇಶ್ ರವರು ಮಾತನಾಡಿ ನಮ್ಮ ಗ್ರಾಮದ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟದ ಖೋ ಖೋ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದಿರುವುದರಿಂದ ನಮ್ಮ ಗ್ರಾಮಕ್ಕೆ ಒಳ್ಳೆ ಹೆಸರು ತಂದು ಮತ್ತು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ನಮ್ಮ ಗ್ರಾಮಸ್ಥರಲ್ಲಿ ಸಂತೋಷದ ವಿಷಯ ತಂದಿದ್ದಾರೆ ಈ ಶಾಲೆಯ ವಿದ್ಯಾರ್ಥಿನಿಯರು ಮುಂದಿನ ದಿನಗಳಲ್ಲಿ ನೆಡೆಯುವ ಜಿಲ್ಲಾಮಟ್ಟದ ಖೋ ಖೋ ಕ್ರೀಡಾ ಕೂಟದಲ್ಲಿ ಜಯಶೀಲರಾಗಿ ರಾಜ್ಯಮಟ್ಟದ ಖೋ ಖೋ ಕ್ರೀಡಾ ಕೂಟಕ್ಕೆ ನೀವು ಹೋಗಬೇಕೆಂದು ವಿದ್ಯಾರ್ಥಿನಿಯರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣಾಧಿಕಾರಿಗಳಾದ ಎಂ.ಶಶಿಧರ್, ದೈಹಿಕ ಶಿಕ್ಷಣ ಶಿಕ್ಷಕರಾದ ಚನ್ನಬಸಪ್ಪ ,ಕೊಟ್ರಯ್ಯ,ಬಸವೇಶ,ವೇದಮೂರ್ತಿ,
ಎಂ.ಪಾರ್ವತಮ್ಮ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ